Advertisement
The Rural Mirror ಕಾಳಜಿ

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

Share
ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ ಪ್ರದೇಶದಲ್ಲಿ ವಾರದ ಎಲ್ಲಾ ದಿನವೂ ವಿವಿಧ ಕ್ಲಾಸ್‌ಗಳು. ಚಿತ್ರಕಲೆ, ಸಂಗೀತ, ಕರಾಟೆ, ಚೆಸ್‌, ಮ್ಯೂಸಿಕ್‌, ಯಕ್ಷಗಾನ… ಹೀಗೇ. ಕೆಲವು ಮಕ್ಕಳಂತೂ ಎಲ್ಲದರಲ್ಲೂ ಇರುತ್ತಾರೆ. ಯಾವುದರಲ್ಲೂ ವೇದಿಕೆ ಸಿಗುವುದಿಲ್ಲ..!.  ಕಾರಣ ಬೇರೆ ಬೇರೆ. ಗ್ರಾಮೀಣ ಭಾಗದ ಮಕ್ಕಳು ಕೂಡಾ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಆದರೆ ವಾರದ ಎಲ್ಲಾ ಕ್ಷೇತ್ರದಲ್ಲಿ ಇರಲು ಸಾಧ್ಯವಾಗುವುದಿಲ್ಲ. ಅಂತಹ ಅವಕಾಶಗಳು ಇಲ್ಲ. ಇಲ್ಲಿ ಪ್ರತಿಭೆಗಳಿದ್ದರೂ ವೇದಿಕೆಯೇ ಸಿಗುವುದಿಲ್ಲ. ಅವಕಾಶಗಳು ಇಲ್ಲ.
ಇಂದು ಎಲ್ಲಾ ಮಕ್ಕಳಿಗೂ ವೇದಿಕೆ ನೀಡುವುದಕ್ಕೆ ಕಷ್ಟ. ನಗರ ಪ್ರದೇಶದಲ್ಲಿ ಸಾಕಷ್ಟು ಅವಕಾಶಗಳು ಇರುತ್ತವೆ.ಒಂದಲ್ಲ ಒಂದು ಅವಕಾಶ. ಅದೇ ಗ್ರಾಮೀಣ ಭಾಗದಲ್ಲಿ ಅದು ಸಾಧ್ಯವಿಲ್ಲ, ಅದು ಪ್ರಾಕ್ಟಿಕಲ್‌ ಕೂಡಾ ಅಲ್ಲ. ಇಂದು ವಿವಿಧ ಮಾಧ್ಯಮಗಳು ಇವೆ, ಸೋಶಿಯಲ್‌ ಮೀಡಿಯಾ ಇದೆ. ಇದ್ದರೂ ಎಲ್ಲರಿಗೂ ಈ ವೇದಿಕೆಯಲ್ಲೂ ತೊಡಗಿಸಿಕೊಂಡು ಮಕ್ಕಳಿಗೆ ವೇದಿಕೆ ನೀಡುವುದು, ಜಗತ್ತಿನ ಮುಂದೆ ತೆರೆದಿಡುವ, Exposure ನೀಡುವುದಕ್ಕೆ ಸಾಧ್ಯವಾಗುವುದಿಲ್ಲ.
ಯಾವತ್ತೂ ಚಿತ್ರಕಲೆ, ಬರಹ ಸೇರಿದಂತೆ ಸೃಜನಾತ್ಮಕ ಚಟುವಟಿಕೆ ಮಕ್ಕಳನ್ನು ಇಂದಿನ ಆಧುನಿಕವಾದ ಸೆಳೆತಗಳಿಂದ ದೂರವಿಡುವುದಕ್ಕೆ ಸಹಕಾರಿ ಎಂಬುದು ಈಗಾಗಲೇ ತಿಳಿದಿದೆ. ಅದರ ಜೊತೆಗೆ ಸೃಜನಾತ್ಮಕ ಚಟುವಟಿಕೆಗಳು ಉತ್ತಮ ಸಮಾಜವನ್ನು ನಿರ್ಮಾಣ ಮಾಡುವುದಕ್ಕೂ ಕಾರಣವಾಗುತ್ತದೆ. ಇಂತಹದೊಂದು ವಾತಾವರಣ ಭವಿಷ್ಯದಲ್ಲಿ ನಿರ್ಮಾಣ ಆಗಲೇಬೇಕಾದ ಅನಿವಾರ್ಯತೆ ಇದೆ. ಏಕೆ ಈ ನಿರೀಕ್ಷೆ ಎಂದು ಇಂದಿನ ಪೋಷಕರಿಗೆ ಕೇಳಿದರೆ ಅವರಲ್ಲಿರುವ ಆತಂಕ ಅರಿವಾಗುತ್ತದೆ.
ಇದಕ್ಕಾಗಿ ಮಕ್ಕಳಿಗೆ ಒಂದು ಪುಟ್ಟ ವೇದಿಕೆ ನೀಡುವುದು, ಈ ಮೂಲಕ ಅವರ ಆಸಕ್ತಿಗೆ ಬೆಳಕು ನೀಡುವ ಪ್ರಯತ್ನ ನಮ್ಮ ದ ರೂರಲ್‌ ಮಿರರ್.ಕಾಂ ಮೂಲಕ ಮಾಡಲು ಉತ್ಸಾಹಿತರಾಗಿದ್ದೇವೆ. ಅಂದರೆ ಸದ್ಯ ಚಿತ್ರಕಲೆ ಹಾಗೂ ಬರಹವನ್ನು ಮಾತ್ರವೇ ಆಯ್ಕೆ ಮಾಡಿಕೊಂಡಿದ್ದೇವೆ. ಯಾವುದೇ ಚಿತ್ರ ಆಗಿರಲಿ, ಚಿತ್ರ ಹೇಗೇ ಇರಲಿ, ಬರಹ ಯಾವುದೇ ಇರಲಿ, ಹೇಗೇ ಇರಲಿ. ಮಗುವಿನ ಕಲ್ಪನೆಯ ಚಿತ್ರ, ಬರಹವೇ ಇರಲಿ. ಅದರ ಯೋಚನೆ ಬೇಡ. ಆಸಕ್ತಿ ಮೂಡಿಸುವುದು ಮೊದಲ ಕೆಲಸ, ಒಂದಷ್ಟು ಜನರಿಗೆ ಇದೇನು ಅಂತ ಅನಿಸಬಹುದು, ಬೇಗನೆ Exposure ನೀಡಿದರೆ ಕಷ್ಟ ಎನ್ನುವ ಭಾವನೆಯೂ ಇರುತ್ತದೆ. ಆದರೆ ಮಗುವಿಗೆ ಆಸಕ್ತಿ ಬೆಳೆಯುವುದಕ್ಕೆ ಬೆನ್ನು ತಟ್ಟಬೇಕು, ಚೆನ್ನಾಗಿದೆ… ಸೂಪರ್‌ ಎಂದು ಹೇಳಬೇಕು, ಒಂಚೂರು ಹೀಗಾಗಬೇಕು ಎನ್ನಬೇಕು,ಆಸಕ್ತಿ ಬೆಳೆಯುತ್ತದೆ. ಚಿತ್ರ ಪೇಪರಲ್ಲಿ ಬರುತ್ತದೆ ಎನ್ನುವ ಆಸಕ್ತಿ ಮುಂದೆ ಕುತೂಹಲವಾಗಿ ಬೆಳೆದು ಒಂದು ಕಲೆ ಕರಗತವಾಗಬಹುದು. ಸಮಾಜಕ್ಕೆ ಒಬ್ಬ ಕಲಾವಿದನ ಕೊಡುಗೆ, ಆತಂಕದ ವಾತಾವರಣದ ನಡುವೆ ಉತ್ತಮ ಚಿಂತನೆಯ ವ್ಯಕ್ತಿಯೊಬ್ಬ ಬೆಳೆಯುವಂತಾಗುತ್ತದೆ. ಹೀಗಾಗಿ ಸೀಮಿತ ಶಕ್ತಿಯ, ಸೀಮಿತ ವ್ಯಾಪ್ತಿಯ ಪುಟ್ಟ ಪ್ರಯತ್ನ ಇದು. ಗೆಲ್ಲಲೇ ಬೇಕು ಅಂತೇನೂ ಇಲ್ಲ. ಅಥವಾ ಇದುವೇ ಬೇರೆಯವರಿಗೂ ಸ್ಫೂರ್ತಿಯಾಗಲೂ ಬಹುದು. ಆದರೆ ದ್ವೇಷದ, ಕಾಲೆಳೆಯುವ ಸಮಾಜದ ನಡುವೆ ಮೇಲೆತ್ತುವ, ಪ್ರೀತಿಸುವ, ಬೆಳಕು ನೀಡುವ, ಹೆಜ್ಜೆಯೊಂದನ್ನು ಇರಿಸಿದ್ದೇವೆ… ಬೆಂಬಲಿಸಿ.. ಬೇರೆಯವರಿಗೂ ಹೇಳಿ… ಇನ್ನೊಬ್ಬರೂ ಬೆಳೆಯಲಿ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

51 minutes ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

7 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

15 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

19 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

24 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago