Advertisement
MIRROR FOCUS

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

Share

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ ಕನ್ನಡಿಗ ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.  ಕೆಲ ಪ್ರವಾಸಿಗರು ಗಾಯಗೊಂಡಿರುವುದಾಗಿ ವರದಿಯಾಗಿದ್ದು,  ಗಾಯಗೊಂಡವರನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. …..ಮುಂದೆ ಓದಿ….

ಘಟನೆ  ಸಂಬಂಧ ಪ್ರಧಾನಿ ನರೇಂದ್ರ ಮೋದಿ,   ಕೇಂದ್ರ  ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ  ಮಾತುಕತೆ ನಡೆಸಿದ್ದು,  ಈ ವೇಳೆ ಪ್ರಧಾನಿ  ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ  ನೀಡಿದ್ದಾರೆ ಎಂದು   ತಿಳಿಸಿದ್ದಾರೆ. ಪ್ರವಾಸಿಗರ ಮೇಲೆ  ನಡೆದ ಘಟನೆ ಖಂಡನಾರ್ಹ.  ಕೃತ್ಯದಲ್ಲಿ ಪಾಲ್ಗೊಂಡವರ ವಿರುದ್ಧ ಕಠಿಣ ಕ್ರ ಮ ಕೈಗೊಳ್ಳಲಾಗುವುದು ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ  ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.  ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಗ್ಧ ನಾಗರಿಕರ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ ಎಂದು ಹೇಳಿದ್ದಾರೆ.  ಜಮ್ಮು-ಕಾಶ್ಮೀರದ  ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.  ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ  ಘಟನೆಯನ್ನು ಖಂಡಿಸಿದ್ದಾರೆ.

ಮಂಗಳವಾರ ಮಧ್ಯಾಹ್ನದ ವೇಳೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.  ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರೆ ತೊಯ್ಬಾದ ಸ್ಥಳೀಯ ಬ್ರಾಂಚ್‌ ಆಗಿರುವ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

4 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

10 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

10 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

18 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

20 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago