Advertisement
ಪ್ರಮುಖ

ಟ್ಯಾಂಕರ್​​ ಬಿಟ್ಟು ಟ್ರ್ಯಾಕ್ಟರ್​​ ಏರಿದ ಪಾಕ್​​ ಸೈನಿಕರು…! | ಲಕ್ಷಾಂತರ ಎಕರೆ ಜಮೀನಿನಲ್ಲಿ ವ್ಯವಸಾಯಕ್ಕೆ ಇಳಿದ ಸೈನಿಕರು | ಗ್ರಾಮೀಣ ಬಡವರ ಹಕ್ಕು ಕಿತ್ತುಕೊಳ್ಳುತ್ತಿದೆ ಸೇನೆ |

Share

ಪಾಕಿಸ್ತಾನದ ಸ್ಥಿತಿ ಎಲ್ಲಿಗೆ ಬಂತು ನೋಡಿ. ಗನ್‌, ಯುದ್ಧ, ಭಯೋತ್ಪಾಧನೆ, ಇನ್ನೊಂದು ದೇಶದ ಮೇಲೆ ಕಾಲು ಕೆರೆದುಕೊಂಡು ಜಗಲ ಮಾಡೋದನ್ನು ಬಿಟ್ಟು ದೇಶದ ಜನತೆಗೆ ಅನ್ನ ಕೊಡುವ ಕಾಯಕದಲ್ಲಿ ತೊಡಗಲು ಮುಂದಾಗಿದೆ. ಪಾಕಿಸ್ತಾನದ ಆರ್ಥಿಕತೆ ಬಿಕ್ಕಟ್ಟಿಗೆ ಸಿಲುಕಿಗೆ ಯಾವುದೋ ಕಾಲವಾಗಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟಿನಲ್ಲಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ದೇಶವನ್ನು ಬಲಪಡಿಸುವ ಸಲುವಾಗಿ, ಪಾಕಿಸ್ತಾನ ಸೇನೆ ಕೃಷಿ ಕ್ಷೇತ್ರವನ್ನು ಪ್ರವೇಶಿಸುತ್ತಿದೆ.

ತಾಜಾ ಬೆಳವಣಿಗೆಯಲ್ಲಿ ಅಕ್ಷರಶಃ ಇಡೀ ದೇಶವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಪಾಕಿಸ್ತಾನ ಸೇನೆ ನಿರ್ಧರಿಸಿದೆ. ಮಾಧ್ಯಮ ಸಂಸ್ಥೆ ನಿಕ್ಕಿ ಏಷ್ಯಾ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ 10 ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ಸೇನೆ ಸ್ವಾಧೀನಪಡಿಸಿಕೊಳ್ಳಲು ಹೊರಟಿದೆ. ಈ ಮೂಲಕ ಸೇನೆ ದೇಶ ಕಾಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ (Agriculture) ಕಾಲಿಟ್ಟಿದೆ. ಇಲ್ಲಿ ಗೋಧಿ, ಹತ್ತಿ, ಕಬ್ಬು, ತರಕಾರಿಗಳು ಮತ್ತು ಹಣ್ಣುಗಳನ್ನು ಬೆಳೆಸಲು ಸೇನೆ ನಿರ್ಧರಿಸಿದೆ.

ಇವುಗಳ ಮಾರಾಟದಿಂದ ಬರುವ ಲಾಭದಲ್ಲಿ ಶೇ. 20 ರಷ್ಟು ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದ ಹಣವನ್ನು ಸೇನೆ ಮತ್ತು ರಾಜ್ಯ ಸರ್ಕಾರ ಸಮನಾಗಿ ಹಂಚಿಕೊಳ್ಳಲಿದೆ. ಬಡವರಿಗೆ ಆಹಾರ ಭದ್ರತೆ ಒದಗಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸೇನೆ ಹೇಳಿಕೊಂಡಿದೆ. ಆದರೆ, ಸೇನೆಯು ಗ್ರಾಮೀಣ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂಬ ಟೀಕೆಗಳಿವೆ. ದೇಶದಲ್ಲಿ ಸುಮಾರು 25 ಮಿಲಿಯನ್ ಜನರು ಬಡವರು ಮತ್ತು ಭೂರಹಿತರಾಗಿರುವ ಈ ಸಮಯದಲ್ಲಿ, ಒಂದಲ್ಲ, ಎರಡಲ್ಲ, ಹತ್ತು ಲಕ್ಷ ಎಕರೆ ಕೃಷಿ ಭೂಮಿ ಸೇನೆಯ ಕೈಗೆ ಹೋಗುತ್ತದೆ ಎಂಬ ಆತಂಕ ಮನೆ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

8 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

9 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

9 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

16 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

21 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

21 hours ago