ಪಾಕಿಸ್ತಾನದ ಸ್ಥಿತಿ ಎಲ್ಲಿಗೆ ಬಂತು ನೋಡಿ. ಗನ್, ಯುದ್ಧ, ಭಯೋತ್ಪಾಧನೆ, ಇನ್ನೊಂದು ದೇಶದ ಮೇಲೆ ಕಾಲು ಕೆರೆದುಕೊಂಡು ಜಗಲ ಮಾಡೋದನ್ನು ಬಿಟ್ಟು ದೇಶದ ಜನತೆಗೆ ಅನ್ನ ಕೊಡುವ ಕಾಯಕದಲ್ಲಿ ತೊಡಗಲು ಮುಂದಾಗಿದೆ. ಪಾಕಿಸ್ತಾನದ ಆರ್ಥಿಕತೆ ಬಿಕ್ಕಟ್ಟಿಗೆ ಸಿಲುಕಿಗೆ ಯಾವುದೋ ಕಾಲವಾಗಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟಿನಲ್ಲಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ದೇಶವನ್ನು ಬಲಪಡಿಸುವ ಸಲುವಾಗಿ, ಪಾಕಿಸ್ತಾನ ಸೇನೆ ಕೃಷಿ ಕ್ಷೇತ್ರವನ್ನು ಪ್ರವೇಶಿಸುತ್ತಿದೆ.
ತಾಜಾ ಬೆಳವಣಿಗೆಯಲ್ಲಿ ಅಕ್ಷರಶಃ ಇಡೀ ದೇಶವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಪಾಕಿಸ್ತಾನ ಸೇನೆ ನಿರ್ಧರಿಸಿದೆ. ಮಾಧ್ಯಮ ಸಂಸ್ಥೆ ನಿಕ್ಕಿ ಏಷ್ಯಾ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ 10 ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ಸೇನೆ ಸ್ವಾಧೀನಪಡಿಸಿಕೊಳ್ಳಲು ಹೊರಟಿದೆ. ಈ ಮೂಲಕ ಸೇನೆ ದೇಶ ಕಾಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ (Agriculture) ಕಾಲಿಟ್ಟಿದೆ. ಇಲ್ಲಿ ಗೋಧಿ, ಹತ್ತಿ, ಕಬ್ಬು, ತರಕಾರಿಗಳು ಮತ್ತು ಹಣ್ಣುಗಳನ್ನು ಬೆಳೆಸಲು ಸೇನೆ ನಿರ್ಧರಿಸಿದೆ.
ಇವುಗಳ ಮಾರಾಟದಿಂದ ಬರುವ ಲಾಭದಲ್ಲಿ ಶೇ. 20 ರಷ್ಟು ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದ ಹಣವನ್ನು ಸೇನೆ ಮತ್ತು ರಾಜ್ಯ ಸರ್ಕಾರ ಸಮನಾಗಿ ಹಂಚಿಕೊಳ್ಳಲಿದೆ. ಬಡವರಿಗೆ ಆಹಾರ ಭದ್ರತೆ ಒದಗಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸೇನೆ ಹೇಳಿಕೊಂಡಿದೆ. ಆದರೆ, ಸೇನೆಯು ಗ್ರಾಮೀಣ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂಬ ಟೀಕೆಗಳಿವೆ. ದೇಶದಲ್ಲಿ ಸುಮಾರು 25 ಮಿಲಿಯನ್ ಜನರು ಬಡವರು ಮತ್ತು ಭೂರಹಿತರಾಗಿರುವ ಈ ಸಮಯದಲ್ಲಿ, ಒಂದಲ್ಲ, ಎರಡಲ್ಲ, ಹತ್ತು ಲಕ್ಷ ಎಕರೆ ಕೃಷಿ ಭೂಮಿ ಸೇನೆಯ ಕೈಗೆ ಹೋಗುತ್ತದೆ ಎಂಬ ಆತಂಕ ಮನೆ ಮಾಡಿದೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…