Advertisement
ಪ್ರಮುಖ

ಟ್ಯಾಂಕರ್​​ ಬಿಟ್ಟು ಟ್ರ್ಯಾಕ್ಟರ್​​ ಏರಿದ ಪಾಕ್​​ ಸೈನಿಕರು…! | ಲಕ್ಷಾಂತರ ಎಕರೆ ಜಮೀನಿನಲ್ಲಿ ವ್ಯವಸಾಯಕ್ಕೆ ಇಳಿದ ಸೈನಿಕರು | ಗ್ರಾಮೀಣ ಬಡವರ ಹಕ್ಕು ಕಿತ್ತುಕೊಳ್ಳುತ್ತಿದೆ ಸೇನೆ |

Share

ಪಾಕಿಸ್ತಾನದ ಸ್ಥಿತಿ ಎಲ್ಲಿಗೆ ಬಂತು ನೋಡಿ. ಗನ್‌, ಯುದ್ಧ, ಭಯೋತ್ಪಾಧನೆ, ಇನ್ನೊಂದು ದೇಶದ ಮೇಲೆ ಕಾಲು ಕೆರೆದುಕೊಂಡು ಜಗಲ ಮಾಡೋದನ್ನು ಬಿಟ್ಟು ದೇಶದ ಜನತೆಗೆ ಅನ್ನ ಕೊಡುವ ಕಾಯಕದಲ್ಲಿ ತೊಡಗಲು ಮುಂದಾಗಿದೆ. ಪಾಕಿಸ್ತಾನದ ಆರ್ಥಿಕತೆ ಬಿಕ್ಕಟ್ಟಿಗೆ ಸಿಲುಕಿಗೆ ಯಾವುದೋ ಕಾಲವಾಗಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟಿನಲ್ಲಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ದೇಶವನ್ನು ಬಲಪಡಿಸುವ ಸಲುವಾಗಿ, ಪಾಕಿಸ್ತಾನ ಸೇನೆ ಕೃಷಿ ಕ್ಷೇತ್ರವನ್ನು ಪ್ರವೇಶಿಸುತ್ತಿದೆ.

Advertisement

ತಾಜಾ ಬೆಳವಣಿಗೆಯಲ್ಲಿ ಅಕ್ಷರಶಃ ಇಡೀ ದೇಶವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಪಾಕಿಸ್ತಾನ ಸೇನೆ ನಿರ್ಧರಿಸಿದೆ. ಮಾಧ್ಯಮ ಸಂಸ್ಥೆ ನಿಕ್ಕಿ ಏಷ್ಯಾ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ 10 ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ಸೇನೆ ಸ್ವಾಧೀನಪಡಿಸಿಕೊಳ್ಳಲು ಹೊರಟಿದೆ. ಈ ಮೂಲಕ ಸೇನೆ ದೇಶ ಕಾಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ (Agriculture) ಕಾಲಿಟ್ಟಿದೆ. ಇಲ್ಲಿ ಗೋಧಿ, ಹತ್ತಿ, ಕಬ್ಬು, ತರಕಾರಿಗಳು ಮತ್ತು ಹಣ್ಣುಗಳನ್ನು ಬೆಳೆಸಲು ಸೇನೆ ನಿರ್ಧರಿಸಿದೆ.

ಇವುಗಳ ಮಾರಾಟದಿಂದ ಬರುವ ಲಾಭದಲ್ಲಿ ಶೇ. 20 ರಷ್ಟು ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದ ಹಣವನ್ನು ಸೇನೆ ಮತ್ತು ರಾಜ್ಯ ಸರ್ಕಾರ ಸಮನಾಗಿ ಹಂಚಿಕೊಳ್ಳಲಿದೆ. ಬಡವರಿಗೆ ಆಹಾರ ಭದ್ರತೆ ಒದಗಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸೇನೆ ಹೇಳಿಕೊಂಡಿದೆ. ಆದರೆ, ಸೇನೆಯು ಗ್ರಾಮೀಣ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂಬ ಟೀಕೆಗಳಿವೆ. ದೇಶದಲ್ಲಿ ಸುಮಾರು 25 ಮಿಲಿಯನ್ ಜನರು ಬಡವರು ಮತ್ತು ಭೂರಹಿತರಾಗಿರುವ ಈ ಸಮಯದಲ್ಲಿ, ಒಂದಲ್ಲ, ಎರಡಲ್ಲ, ಹತ್ತು ಲಕ್ಷ ಎಕರೆ ಕೃಷಿ ಭೂಮಿ ಸೇನೆಯ ಕೈಗೆ ಹೋಗುತ್ತದೆ ಎಂಬ ಆತಂಕ ಮನೆ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

3 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

3 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

3 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

4 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

13 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago