Advertisement
ಸುದ್ದಿಗಳು

ಸೌದಿ ರಾಜನ ಜೊತೆ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪಿಸಿದ ಪಾಕಿಸ್ತಾನ | ಪಾಕ್‌ ನರಿ ಬುದ್ಧಿಗೆ ಎಚ್ಚರಿಕೆಯ ಉತ್ತರ ನೀಡಿದ ಭಾರತ

Share

ಭಾರತದಲ್ಲಿ ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ(Jammu&Kashmir) ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಷಯ ಚರ್ಚೆಯಲ್ಲಿದೆ. ಈ ನಡುವೆ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೌದಿ ಆಡಳಿತಗಾರ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್(Prince Mohammed bin Salman) ಅವರು ನಡೆಸಿದ ಸಭೆಯಲ್ಲಿ ʻಕಾಶ್ಮೀರʼ ಗಡಿ (Kashmir Border) ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಶೆಹಬಾಜ್ ಷರೀಫ್ ಮತ್ತು ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್  ಇದೇ ಏಪ್ರಿಲ್‌ 7 ರಂದು ಮೆಕ್ಕಾದ ಅಲ್-ಸಫಾ ಅರಮನೆಯಲ್ಲಿ ಸಭೆ ನಡೆಸಿದ್ದಾರೆ. ಇದಾದ ಒಂದು ದಿನದ ನಂತರ ಸಭೆಯ ಉದ್ದೇಶವನ್ನು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ಗಡಿ ಸಮಸ್ಯೆಯನ್ನು (Kashmir Border Controversy) ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸಕಾರಾತ್ಮಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅನ್ವೇಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಭಯ ದೇಶಗಳನ್ನ ನಡುವೆ ಇರುವ ಸಮಸ್ಯೆಗಳನ್ನು ಪರಿಹರಿಸಲು, ಅದರಲ್ಲೂ ಮುಖ್ಯವಾಗಿ ಕಾಶ್ಮೀರ ವಿವಾದ ಪರಿಹರಿಸಿ ಶಾಂತಿ ನೆಲೆಸುವಂತೆ ಮಾಡಬೇಕು. ಈ ಕುರಿತು ಮಾತುಕತೆ ನಡೆಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಾಮಾನ್ಯ ನೆರೆಯ ಸಬಂಧಗಳನ್ನು ಬಯಸುತ್ತದೆ ಎಂಬುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ ಸರ್ಕಾರ, ಕಾಶ್ಮೀರ ಗಡಿ ಸಮಸ್ಯೆ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆಯಾಗಿದೆ. ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಪ್ರಶ್ನೆಯೇ ಇಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಶಾಶ್ವತವಾಗಿಯೇ ಉಳಿಯುತ್ತದೆ. ಇದನ್ನು ಭಾರತ, ಪಾಕಿಸ್ತಾನಕ್ಕೆ ಪದೇ ಪದೇ ನೆನಪಿಸುತ್ತಿದೆ ಎಂದು ಒತ್ತಿ ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

9 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

9 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

9 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

9 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

9 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ವರದಿ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

9 hours ago