ಭಾರತದಲ್ಲಿ ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ(Jammu&Kashmir) ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಷಯ ಚರ್ಚೆಯಲ್ಲಿದೆ. ಈ ನಡುವೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೌದಿ ಆಡಳಿತಗಾರ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್(Prince Mohammed bin Salman) ಅವರು ನಡೆಸಿದ ಸಭೆಯಲ್ಲಿ ʻಕಾಶ್ಮೀರʼ ಗಡಿ (Kashmir Border) ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಶೆಹಬಾಜ್ ಷರೀಫ್ ಮತ್ತು ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಇದೇ ಏಪ್ರಿಲ್ 7 ರಂದು ಮೆಕ್ಕಾದ ಅಲ್-ಸಫಾ ಅರಮನೆಯಲ್ಲಿ ಸಭೆ ನಡೆಸಿದ್ದಾರೆ. ಇದಾದ ಒಂದು ದಿನದ ನಂತರ ಸಭೆಯ ಉದ್ದೇಶವನ್ನು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ಗಡಿ ಸಮಸ್ಯೆಯನ್ನು (Kashmir Border Controversy) ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸಕಾರಾತ್ಮಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅನ್ವೇಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಭಯ ದೇಶಗಳನ್ನ ನಡುವೆ ಇರುವ ಸಮಸ್ಯೆಗಳನ್ನು ಪರಿಹರಿಸಲು, ಅದರಲ್ಲೂ ಮುಖ್ಯವಾಗಿ ಕಾಶ್ಮೀರ ವಿವಾದ ಪರಿಹರಿಸಿ ಶಾಂತಿ ನೆಲೆಸುವಂತೆ ಮಾಡಬೇಕು. ಈ ಕುರಿತು ಮಾತುಕತೆ ನಡೆಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಾಮಾನ್ಯ ನೆರೆಯ ಸಬಂಧಗಳನ್ನು ಬಯಸುತ್ತದೆ ಎಂಬುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ ಸರ್ಕಾರ, ಕಾಶ್ಮೀರ ಗಡಿ ಸಮಸ್ಯೆ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆಯಾಗಿದೆ. ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಪ್ರಶ್ನೆಯೇ ಇಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಶಾಶ್ವತವಾಗಿಯೇ ಉಳಿಯುತ್ತದೆ. ಇದನ್ನು ಭಾರತ, ಪಾಕಿಸ್ತಾನಕ್ಕೆ ಪದೇ ಪದೇ ನೆನಪಿಸುತ್ತಿದೆ ಎಂದು ಒತ್ತಿ ಹೇಳಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…