Advertisement
ಸುದ್ದಿಗಳು

ಸೌದಿ ರಾಜನ ಜೊತೆ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪಿಸಿದ ಪಾಕಿಸ್ತಾನ | ಪಾಕ್‌ ನರಿ ಬುದ್ಧಿಗೆ ಎಚ್ಚರಿಕೆಯ ಉತ್ತರ ನೀಡಿದ ಭಾರತ

Share

ಭಾರತದಲ್ಲಿ ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ(Jammu&Kashmir) ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಷಯ ಚರ್ಚೆಯಲ್ಲಿದೆ. ಈ ನಡುವೆ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೌದಿ ಆಡಳಿತಗಾರ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್(Prince Mohammed bin Salman) ಅವರು ನಡೆಸಿದ ಸಭೆಯಲ್ಲಿ ʻಕಾಶ್ಮೀರʼ ಗಡಿ (Kashmir Border) ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದಾರೆ.

Advertisement
Advertisement

ಶೆಹಬಾಜ್ ಷರೀಫ್ ಮತ್ತು ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್  ಇದೇ ಏಪ್ರಿಲ್‌ 7 ರಂದು ಮೆಕ್ಕಾದ ಅಲ್-ಸಫಾ ಅರಮನೆಯಲ್ಲಿ ಸಭೆ ನಡೆಸಿದ್ದಾರೆ. ಇದಾದ ಒಂದು ದಿನದ ನಂತರ ಸಭೆಯ ಉದ್ದೇಶವನ್ನು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ಗಡಿ ಸಮಸ್ಯೆಯನ್ನು (Kashmir Border Controversy) ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸಕಾರಾತ್ಮಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅನ್ವೇಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

ಉಭಯ ದೇಶಗಳನ್ನ ನಡುವೆ ಇರುವ ಸಮಸ್ಯೆಗಳನ್ನು ಪರಿಹರಿಸಲು, ಅದರಲ್ಲೂ ಮುಖ್ಯವಾಗಿ ಕಾಶ್ಮೀರ ವಿವಾದ ಪರಿಹರಿಸಿ ಶಾಂತಿ ನೆಲೆಸುವಂತೆ ಮಾಡಬೇಕು. ಈ ಕುರಿತು ಮಾತುಕತೆ ನಡೆಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಾಮಾನ್ಯ ನೆರೆಯ ಸಬಂಧಗಳನ್ನು ಬಯಸುತ್ತದೆ ಎಂಬುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ ಸರ್ಕಾರ, ಕಾಶ್ಮೀರ ಗಡಿ ಸಮಸ್ಯೆ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆಯಾಗಿದೆ. ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಪ್ರಶ್ನೆಯೇ ಇಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಶಾಶ್ವತವಾಗಿಯೇ ಉಳಿಯುತ್ತದೆ. ಇದನ್ನು ಭಾರತ, ಪಾಕಿಸ್ತಾನಕ್ಕೆ ಪದೇ ಪದೇ ನೆನಪಿಸುತ್ತಿದೆ ಎಂದು ಒತ್ತಿ ಹೇಳಿದೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

28 mins ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

2 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

3 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

20 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

20 hours ago