Advertisement
ಸುದ್ದಿಗಳು

ಸೌದಿ ರಾಜನ ಜೊತೆ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪಿಸಿದ ಪಾಕಿಸ್ತಾನ | ಪಾಕ್‌ ನರಿ ಬುದ್ಧಿಗೆ ಎಚ್ಚರಿಕೆಯ ಉತ್ತರ ನೀಡಿದ ಭಾರತ

Share

ಭಾರತದಲ್ಲಿ ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ(Jammu&Kashmir) ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಷಯ ಚರ್ಚೆಯಲ್ಲಿದೆ. ಈ ನಡುವೆ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೌದಿ ಆಡಳಿತಗಾರ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್(Prince Mohammed bin Salman) ಅವರು ನಡೆಸಿದ ಸಭೆಯಲ್ಲಿ ʻಕಾಶ್ಮೀರʼ ಗಡಿ (Kashmir Border) ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಶೆಹಬಾಜ್ ಷರೀಫ್ ಮತ್ತು ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್  ಇದೇ ಏಪ್ರಿಲ್‌ 7 ರಂದು ಮೆಕ್ಕಾದ ಅಲ್-ಸಫಾ ಅರಮನೆಯಲ್ಲಿ ಸಭೆ ನಡೆಸಿದ್ದಾರೆ. ಇದಾದ ಒಂದು ದಿನದ ನಂತರ ಸಭೆಯ ಉದ್ದೇಶವನ್ನು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ಗಡಿ ಸಮಸ್ಯೆಯನ್ನು (Kashmir Border Controversy) ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸಕಾರಾತ್ಮಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅನ್ವೇಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಭಯ ದೇಶಗಳನ್ನ ನಡುವೆ ಇರುವ ಸಮಸ್ಯೆಗಳನ್ನು ಪರಿಹರಿಸಲು, ಅದರಲ್ಲೂ ಮುಖ್ಯವಾಗಿ ಕಾಶ್ಮೀರ ವಿವಾದ ಪರಿಹರಿಸಿ ಶಾಂತಿ ನೆಲೆಸುವಂತೆ ಮಾಡಬೇಕು. ಈ ಕುರಿತು ಮಾತುಕತೆ ನಡೆಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಾಮಾನ್ಯ ನೆರೆಯ ಸಬಂಧಗಳನ್ನು ಬಯಸುತ್ತದೆ ಎಂಬುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ ಸರ್ಕಾರ, ಕಾಶ್ಮೀರ ಗಡಿ ಸಮಸ್ಯೆ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆಯಾಗಿದೆ. ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಪ್ರಶ್ನೆಯೇ ಇಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಶಾಶ್ವತವಾಗಿಯೇ ಉಳಿಯುತ್ತದೆ. ಇದನ್ನು ಭಾರತ, ಪಾಕಿಸ್ತಾನಕ್ಕೆ ಪದೇ ಪದೇ ನೆನಪಿಸುತ್ತಿದೆ ಎಂದು ಒತ್ತಿ ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago