Advertisement
ಸುದ್ದಿಗಳು

ರಷ್ಯಾ-ಉಕ್ರೇನ್‌ ಯುದ್ಧ | ಟರ್ಕಿ ಮತ್ತು ಪಾಕಿಸ್ತಾನಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ |

Share

ಉಕ್ರೇನ್‌ ರಷ್ಯಾ ಯುದ್ಧದ ಸಂದರ್ಭ ರಕ್ಷಣೆಗಾಗಿ ಪರದಾಟ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ದೇಶದ ತ್ರಿವರ್ಣ ಧ್ವಜವು ನೆರವಿಗೆ ಬಂದಿತ್ತು. ಭಾರತದ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪಾಕಿಸ್ತಾನ ಮತ್ತು ಟರ್ಕಿಯಿಂದ ಬಂದವರಿಗೆ ಕೂಡಾ  ಸಹಾಯ ಮಾಡಿತು.

ಉಕ್ರೇನ್‌ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು, ಯುದ್ಧ ಪೀಡಿತ ಪ್ರದೇಶದ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಭಾರತದ ರಾಷ್ಟ್ರೀಯ ತ್ರಿವರ್ಣ ಧ್ವಜವು ತಮಗೆ ಮತ್ತು ಕೆಲವು ಪಾಕಿಸ್ತಾನಿ ಟರ್ಕಿಶ್ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಉಕ್ರೇನ್‌ನ ನೆರೆಯ ದೇಶಗಳಿಂದ ‘ಆಪರೇಷನ್ ಗಂಗಾ’ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಿಡಿಯಲು ಭಾರತೀಯ ವಿದ್ಯಾರ್ಥಿಗಳು ರೊಮೇನಿಯನ್ ನಗರಕ್ಕೆ ಆಗಮಿಸಿದ್ದಾರೆ. ಏರ್ ಇಂಡಿಯಾ, ಸ್ಪೈಸ್ ಜೆಟ್ ಮತ್ತು ಇಂಡಿಗೋ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಾರಿಸುತ್ತಿವೆ. ಸುಮಾರು 18 ಸಾವಿರಕ್ಕೂ ಅಧಿಕ ಭಾರತೀಯರನ್ನು ಭಾರತ ಸರ್ಕಾರವು ರಕ್ಷಣೆ ಮಾಡಿದೆ. ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಪಾಕಿಸ್ತಾನ, ಟರ್ಕಿಶ್‌ ವಿದ್ಯಾರ್ಥಿಗಳೂ ಭಾರತೀಯ ಧ್ವಜವನ್ನು ಹಿಡಿದುಕೊಂಡು ಯುದ್ಧ ಭೂಮಿಯ ಚೆಕ್‌ ಪೋಸ್ಟ್‌ ದಾಟಿ ಬಂದಿದ್ದರು. ವಿದ್ಯಾರ್ಥಿಗಳು ಭಾರತೀಯ ಧ್ವಜಗಳನ್ನು  ಮಾರುಕಟ್ಟೆಯಿಂದ ಸ್ಪ್ರೇ ಪೇಂಟ್‌ಗಳನ್ನು ಖರೀದಿಸಿ ರಚಿಸಿದ್ದರು. ಗಡಿಭಾಗಕ್ಕೆ ಬಂದ ಬಳಿಕವೂ ಆ ದೇಶದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದರೆ ಭಾರತೀಯ ವಿದ್ಯಾರ್ಥಿಗಳು ತಮಗಾಗಿ ಕಾಯುತ್ತಿದ್ದ ವಿಮಾನದಕ್ಕಿ ಭಾರತಕ್ಕೆ ಬಂದಿಳಿದರು. ( Republic World Vedio ಇಲ್ಲಿದೆ )

(ವಿಡಿಯೋ ಕೃಪೆ : ರಿಪಬ್ಲಿಕ್‌ ಟಿವಿ)

“ನಾನು ಮಾರುಕಟ್ಟೆಗೆ ಹೋಗಿ,  ಕಲರ್ ಸ್ಪ್ರೇಗಳು ಮತ್ತು ಪರದೆಯನ್ನು ಖರೀದಿಸಿದೆ. ನಂತರ ನಾನು ಪರದೆಯನ್ನು ಕತ್ತರಿಸಿ ಭಾರತೀಯ ತ್ರಿವರ್ಣ ಧ್ವಜವನ್ನು ತಯಾರಿಸಲು ಅದನ್ನು ಸಿಂಪಡಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ಸುದ್ದಿ ಸಂಸ್ಥೆಗೆ ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

36 minutes ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

1 hour ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

15 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

16 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

17 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

17 hours ago