ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಸಂಕಷ್ಟ | ಹರಡುತ್ತಿರುವ ರೋಗ | ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಚಿಂತನೆ | ಪ್ರವಾಹದಿಂದ 1,500 ಕ್ಕೂ ಹೆಚ್ಚು ಜನರು ಬಲಿ | 2000 ಆರೋಗ್ಯ ಕೇಂದ್ರಗಳಿಗೆ ಹಾನಿ |

September 23, 2022
9:38 PM
Advertisement

ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ  ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು  ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ  ಕಳವಳ ವ್ಯಕ್ತಪಡಿಸಿದೆ.

Advertisement
Advertisement
Advertisement

ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ  ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.

Advertisement

ಪಾಕಿಸ್ತಾನದ  ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror