ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಸಂಕಷ್ಟ | ಹರಡುತ್ತಿರುವ ರೋಗ | ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಚಿಂತನೆ | ಪ್ರವಾಹದಿಂದ 1,500 ಕ್ಕೂ ಹೆಚ್ಚು ಜನರು ಬಲಿ | 2000 ಆರೋಗ್ಯ ಕೇಂದ್ರಗಳಿಗೆ ಹಾನಿ |

September 23, 2022
9:38 PM

ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ  ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು  ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ  ಕಳವಳ ವ್ಯಕ್ತಪಡಿಸಿದೆ.

ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ  ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.

ಪಾಕಿಸ್ತಾನದ  ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror