ರಾಷ್ಟ್ರೀಯ

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಸಂಕಷ್ಟ | ಹರಡುತ್ತಿರುವ ರೋಗ | ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಚಿಂತನೆ | ಪ್ರವಾಹದಿಂದ 1,500 ಕ್ಕೂ ಹೆಚ್ಚು ಜನರು ಬಲಿ | 2000 ಆರೋಗ್ಯ ಕೇಂದ್ರಗಳಿಗೆ ಹಾನಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ  ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು  ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ  ಕಳವಳ ವ್ಯಕ್ತಪಡಿಸಿದೆ.

Advertisement

ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ  ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.

ಪಾಕಿಸ್ತಾನದ  ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

15 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

19 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

19 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

21 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

2 days ago