Advertisement
ರಾಷ್ಟ್ರೀಯ

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಸಂಕಷ್ಟ | ಹರಡುತ್ತಿರುವ ರೋಗ | ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಚಿಂತನೆ | ಪ್ರವಾಹದಿಂದ 1,500 ಕ್ಕೂ ಹೆಚ್ಚು ಜನರು ಬಲಿ | 2000 ಆರೋಗ್ಯ ಕೇಂದ್ರಗಳಿಗೆ ಹಾನಿ |

Share

ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ  ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು  ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ  ಕಳವಳ ವ್ಯಕ್ತಪಡಿಸಿದೆ.

ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ  ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.

ಪಾಕಿಸ್ತಾನದ  ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

39 minutes ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

13 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

13 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

20 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

21 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago