Advertisement
ರಾಷ್ಟ್ರೀಯ

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಸಂಕಷ್ಟ | ಹರಡುತ್ತಿರುವ ರೋಗ | ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಚಿಂತನೆ | ಪ್ರವಾಹದಿಂದ 1,500 ಕ್ಕೂ ಹೆಚ್ಚು ಜನರು ಬಲಿ | 2000 ಆರೋಗ್ಯ ಕೇಂದ್ರಗಳಿಗೆ ಹಾನಿ |

Share

ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ  ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು  ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ  ಕಳವಳ ವ್ಯಕ್ತಪಡಿಸಿದೆ.

ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ  ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.

ಪಾಕಿಸ್ತಾನದ  ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

30 minutes ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

5 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

9 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago