Advertisement
ರಾಷ್ಟ್ರೀಯ

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಸಂಕಷ್ಟ | ಹರಡುತ್ತಿರುವ ರೋಗ | ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಚಿಂತನೆ | ಪ್ರವಾಹದಿಂದ 1,500 ಕ್ಕೂ ಹೆಚ್ಚು ಜನರು ಬಲಿ | 2000 ಆರೋಗ್ಯ ಕೇಂದ್ರಗಳಿಗೆ ಹಾನಿ |

Share

ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ  ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು  ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ  ಕಳವಳ ವ್ಯಕ್ತಪಡಿಸಿದೆ.

ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ  ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.

ಪಾಕಿಸ್ತಾನದ  ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago