ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಕಳವಳ ವ್ಯಕ್ತಪಡಿಸಿದೆ.
ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.
ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…