Advertisement
ರಾಷ್ಟ್ರೀಯ

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಸಂಕಷ್ಟ | ಹರಡುತ್ತಿರುವ ರೋಗ | ಭಾರತದಿಂದ ಸೊಳ್ಳೆ ಪರದೆಗಳನ್ನು ಖರೀದಿಸಲು ಚಿಂತನೆ | ಪ್ರವಾಹದಿಂದ 1,500 ಕ್ಕೂ ಹೆಚ್ಚು ಜನರು ಬಲಿ | 2000 ಆರೋಗ್ಯ ಕೇಂದ್ರಗಳಿಗೆ ಹಾನಿ |

Share

ಪ್ರಾಕೃತಿಕ ವಿಕೋಪ ಬಳಿಕ ಪಾಕಿಸ್ತಾನ ಸಂಪೂರ್ಣ  ಕಂಗೆಟ್ಟಿದೆ.ಭಾರೀ ಮಳೆಯ ಕಾರಣದಿಂದ ದೇಶದ ಹಲವು ಪ್ರದೇಶಗಳು ಮುಳುಗಡೆಯಾಗಿತ್ತು. ಪ್ರವಾಹದ ಕಾರಣದಿಂದ 1500 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 2000 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ನಾಶವಾಗಿದೆ. ಇದೀಗ ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತಿರುವುದು  ಅಲ್ಲಿನ ಆತಂಕವನ್ನು ಹೆಚ್ಚು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ  ಕಳವಳ ವ್ಯಕ್ತಪಡಿಸಿದೆ.

ಪ್ರವಾಹ ತಗ್ಗಿದರೂ ದೇಶದ ಅದರಲ್ಲೂ ಪಾಕಿಸ್ತಾನದ ಗ್ರಾಮೀಣ ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನರು ಅಸುರಕ್ಷಿತ ನೀರನ್ನು ಕುಡಿಯಬೇಕಾಗಿದೆ. ಇದರಿಂದಾಗಿ  ಕಾಲರಾ ಮತ್ತು ಇತರ ಅತಿಸಾರ ರೋಗಗಳು ಹರಡಲು ಕಾರಣವಾಗಿದೆ.ನಿಂತ ನೀರು ಸೊಳ್ಳೆಗಳನ್ನು ಸಂತಾನೋತ್ಪತ್ತಿ ಮಾಡಲು ಮತ್ತು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಕಾರಕ-ಹರಡುವ ರೋಗಗಳನ್ನು ಹರಡಲು ಅನುವಾಗಿದೆ. ಇದು ಕೂಡಾ ಆತಂಕಕ್ಕೆ ಕಾರಣವಾಗಿದೆ.

ಪಾಕಿಸ್ತಾನದ  ಹಲವಾರು ಭಾಗಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸೊಳ್ಳೆಗಳ ಮೂಲಕ ಹರಡುವ ರೋಗಗಳ ಉಲ್ಬಣದಿಂದಾಗಿ ಪಾಕಿಸ್ತಾನದ ಆರೋಗ್ಯ ಅಧಿಕಾರಿಗಳು ಭಾರತದಿಂದ ಸುಮಾರು 7.1 ಮಿಲಿಯನ್ ಸೊಳ್ಳೆ ಪರದೆಗಳನ್ನು ಖರೀದಿಸಲು ಸರ್ಕಾರದ ಅನುಮತಿಯನ್ನು ಕೋರಿದ್ದಾರೆ ಎಂದು ಅಲ್ಲಿನ ಮಾಧ್ಯಮ ವರದಿಯೊಂದು ತಿಳಿಸಿದೆ. ಈಗಾಗಲೇ ಮಲೇರಿಯಾ ಜ್ವರ ವ್ಯಾಪಕವಾಗಿದೆ. ಅದರ ಜೊತೆಗೆ ಹೊಸ ಬಗೆಯ ರೋಗವೂ ಕಾಣುತ್ತಿದೆ ಎದು ವರದಿಯೊಂದು ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

14 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago