ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಲು ಯತ್ನಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿಸಿ ಅಲ್ಲಿಯೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಕಾರು ಸಮೇತ ಸೆರೆ ಹಿಡಿದ ಘಟನೆ ಮಾ.25 ರ ಸಂಜೆ ವರದಿಯಾಗಿದೆ.
ಪೋಲಿಸರು ಆರೋಪಿಯನ್ನು ಸೆರೆ ಹಿಡಿದು ವಿಚಾರಣೆ ನಡೆಸಲಾಗಿ ಕಾರು ಚಾಲಕ ಪೆರಾಜೆ ಮೂಲದ ಸುಕುಮಾರ ಗರುಗುಂಜ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬೈಕ್ ಸವಾರ ಪಾಲಡ್ಕದ ಸಚಿನ್ ಸಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾದರೆ, ಕೂಲಿಯಾಳುಗಳನ್ನು ಸುಳ್ಯಕ್ಕೆ ಕರೆದೊಯ್ಯುತ್ತಿದ್ದ ರಿಕ್ಷಾ ನಜ್ಜುಗುಜ್ಜಾಗಿದೆ. ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಆಲೆಟ್ಟಿ ಕಡೆ ಪರಾರಿಯಾಗಲೆತ್ನಿಸಿದಾಗ ಪೋಲಿಸರು ಕಾರು ಅಡ್ಡಗಟ್ಟಿ ಆರೋಪಿಯನ್ನು ಕಾರು ಸಮೇತ ಸೆರೆ ಹಿಡಿದು ಠಾಣೆಗೆ ಕರೆದೊಯ್ದಿರುವುದಾಗಿ ತಿಳಿದು ಬಂದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

