ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಲು ಯತ್ನಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿಸಿ ಅಲ್ಲಿಯೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಕಾರು ಸಮೇತ ಸೆರೆ ಹಿಡಿದ ಘಟನೆ ಮಾ.25 ರ ಸಂಜೆ ವರದಿಯಾಗಿದೆ.
ಪೋಲಿಸರು ಆರೋಪಿಯನ್ನು ಸೆರೆ ಹಿಡಿದು ವಿಚಾರಣೆ ನಡೆಸಲಾಗಿ ಕಾರು ಚಾಲಕ ಪೆರಾಜೆ ಮೂಲದ ಸುಕುಮಾರ ಗರುಗುಂಜ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬೈಕ್ ಸವಾರ ಪಾಲಡ್ಕದ ಸಚಿನ್ ಸಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾದರೆ, ಕೂಲಿಯಾಳುಗಳನ್ನು ಸುಳ್ಯಕ್ಕೆ ಕರೆದೊಯ್ಯುತ್ತಿದ್ದ ರಿಕ್ಷಾ ನಜ್ಜುಗುಜ್ಜಾಗಿದೆ. ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಆಲೆಟ್ಟಿ ಕಡೆ ಪರಾರಿಯಾಗಲೆತ್ನಿಸಿದಾಗ ಪೋಲಿಸರು ಕಾರು ಅಡ್ಡಗಟ್ಟಿ ಆರೋಪಿಯನ್ನು ಕಾರು ಸಮೇತ ಸೆರೆ ಹಿಡಿದು ಠಾಣೆಗೆ ಕರೆದೊಯ್ದಿರುವುದಾಗಿ ತಿಳಿದು ಬಂದಿದೆ.ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…