Advertisement
ಸುದ್ದಿಗಳು

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

Share

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ. ಜೂನ್.‌1 ರವಿವಾರದಂದು ಪುತ್ತೂರು ಬೊಳ್ವಾರಿನ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ಮಲರಾಯ ಸಪರಿವಾರ ಕ್ಷೇತ್ರದ ವಠಾರದಲ್ಲಿ ಸಂಜೆ ಗಂಟೆ 5-30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

ಈ ಸಂದರ್ಭದಲ್ಲಿ ಶ್ರೀ ಕೃಷ್ಣಪ್ರಕಾಶ್ ಉಳಿತ್ತಾಯರು ಬರೆದ ಪಾಲೆಚ್ಚಾರು ಗೋವಿಂದ ನಾಯಕ್ ಅವರ ಕಲಾಯಾನ ಕೃತಿ ‘ಗೋವಿಂದ ಗಾಥೆ’ ಅನಾವರಣಗೊಳ್ಳಲಿದೆ. ‘ಈಶಾವಾಸ್ಯ ಪೆರ್ಮಂಕಿ’ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನ (ರಿ) ಬೊಳ್ವಾರು – ಇವರ ಜಂಟಿ ಆಯೋಜನೆಯಲ್ಲಿ ಕಾರ್ಯಕ್ರಮ ಸಂಪನ್ನವಾಗಲಿದೆ.

ಶ್ರೀ ಎಡನೀರು ಮಠಾಧೀಶ ಪರಮಪೂಜ್ಯ  ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭವನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕ್ಷೇತ್ರದ ಪವಿತ್ರಪಾಣಿ  ಬಾಲಸುಬ್ರಹ್ಮಣ್ಯ ಭಟ್ ವಹಿಸಲಿದ್ದಾರೆ. ‘ಗೋವಿಂದ ಗಾಥೆ’ ಪುಸ್ತಕದ ಕುರಿತು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ  ನಾ. ಕಾರಂತ ಪೆರಾಜೆ ಮಾತನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಅಗರಿ ಎಂಟರ್‍ಪ್ರೈಸಸ್ ಇದರ  ಅಗರಿ ರಾಘವೇಂದ್ರ ರಾವ್, ಸಾಹಿತಿ  ಲಕ್ಷ್ಮೀ ಮಚ್ಚಿನ, ವಿಶ್ರಾಂತ ಪ್ರಾಂಶುಪಾಲ  ಮಹಾಲಿಂಗೇಶ್ವರ ಭಟ್ ಹಾಗೂ ಹಿರಿಯ ಮದ್ಲೆಗಾರ್  ವೆಂಕಟ್ರಮಣ ಉಳಿತ್ತಾಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾರಂಭದ ಪೂರ್ವದಲ್ಲಿ ‘ಜಾಂಬವತಿ ಕಲ್ಯಾಣ’ ಪ್ರಸಂಗದ ತಾಳಮದ್ದಳೆ ಜರುಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

13 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

20 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

20 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago