ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ. ಜೂನ್.1 ರವಿವಾರದಂದು ಪುತ್ತೂರು ಬೊಳ್ವಾರಿನ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ಮಲರಾಯ ಸಪರಿವಾರ ಕ್ಷೇತ್ರದ ವಠಾರದಲ್ಲಿ ಸಂಜೆ ಗಂಟೆ 5-30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಈ ಸಂದರ್ಭದಲ್ಲಿ ಶ್ರೀ ಕೃಷ್ಣಪ್ರಕಾಶ್ ಉಳಿತ್ತಾಯರು ಬರೆದ ಪಾಲೆಚ್ಚಾರು ಗೋವಿಂದ ನಾಯಕ್ ಅವರ ಕಲಾಯಾನ ಕೃತಿ ‘ಗೋವಿಂದ ಗಾಥೆ’ ಅನಾವರಣಗೊಳ್ಳಲಿದೆ. ‘ಈಶಾವಾಸ್ಯ ಪೆರ್ಮಂಕಿ’ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನ (ರಿ) ಬೊಳ್ವಾರು – ಇವರ ಜಂಟಿ ಆಯೋಜನೆಯಲ್ಲಿ ಕಾರ್ಯಕ್ರಮ ಸಂಪನ್ನವಾಗಲಿದೆ.
ಶ್ರೀ ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭವನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ವಹಿಸಲಿದ್ದಾರೆ. ‘ಗೋವಿಂದ ಗಾಥೆ’ ಪುಸ್ತಕದ ಕುರಿತು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರಿನ ಅಗರಿ ಎಂಟರ್ಪ್ರೈಸಸ್ ಇದರ ಅಗರಿ ರಾಘವೇಂದ್ರ ರಾವ್, ಸಾಹಿತಿ ಲಕ್ಷ್ಮೀ ಮಚ್ಚಿನ, ವಿಶ್ರಾಂತ ಪ್ರಾಂಶುಪಾಲ ಮಹಾಲಿಂಗೇಶ್ವರ ಭಟ್ ಹಾಗೂ ಹಿರಿಯ ಮದ್ಲೆಗಾರ್ ವೆಂಕಟ್ರಮಣ ಉಳಿತ್ತಾಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾರಂಭದ ಪೂರ್ವದಲ್ಲಿ ‘ಜಾಂಬವತಿ ಕಲ್ಯಾಣ’ ಪ್ರಸಂಗದ ತಾಳಮದ್ದಳೆ ಜರುಗಲಿದೆ.
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…