ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ರೈತರು ಆರ್ಥಿಕವಾಗಿ ಸದೃಢರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ತಾಳೆ ಬೆಳೆ ಪ್ಲಾಂಟೇಷನ್ ಮೇಘಾ ಡ್ರೈವ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪರ್ಯಾಯ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸಿ ಇಲಾಖೆಗಳು ರೈತರ ಆರ್ಥಿಕ ಮಟ್ಟವನ್ನು ಸುಧಾರಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ತಾಳೆ ಎಣ್ಣೆಯನ್ನು ಸಾಕಷ್ಟು ಬಳಕೆ ಮಾಡುತ್ತಿದ್ದು, ಇಲಾಖೆಯಿಂದ ತಾಳೆ ಬೆಗೆ ಸಿಗುವ ಸಹಾಯ ಸೌವಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel