ಜಿ.ಎಸ್.ಟಿ ತೆರಿಗೆ ಹಣ ಪಾವತಿಸದೇ ಪಾನ್ ಮಸಲಾ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನಲೆಯಿಂದ ತೆರಿಗೆ ಹಾಗೂ ಡಿಜಿಜಿಐ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಈ ವೇಳೆ ಮನೆಗಳಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವ ನೋಟುಗಳ ಕಂತೆ ಪತ್ತೆಯಾಗಿದ್ದು ಸುಮಾರು 150 ಕೋಟಿ ರೂ ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್, ಮುಂಬೈ, ಗುಜರಾತ್ನ ವಿವಿಧ ಸ್ಥಳಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅನಧಿಕೃತವಾದ ವ್ಯವಹಾರ ಹಾಗೂ ಹಣ ದಾಸ್ತಾನು ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತೆರಿಗೆ ಪಾವತಿಸಿಯೇ ವ್ಯವಹಾರ ನಡೆಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕೆ ಧಾರಣೆ ಏರಿಕೆ ಬಳಿಕ ಇಂತಹ ಧಾಳಿಗಳು ಹೆಚ್ಚಾಗಿ ಕಂಡುಬಂದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel