ಜಿ.ಎಸ್.ಟಿ ತೆರಿಗೆ ಹಣ ಪಾವತಿಸದೇ ಪಾನ್ ಮಸಲಾ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನಲೆಯಿಂದ ತೆರಿಗೆ ಹಾಗೂ ಡಿಜಿಜಿಐ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಈ ವೇಳೆ ಮನೆಗಳಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವ ನೋಟುಗಳ ಕಂತೆ ಪತ್ತೆಯಾಗಿದ್ದು ಸುಮಾರು 150 ಕೋಟಿ ರೂ ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್, ಮುಂಬೈ, ಗುಜರಾತ್ನ ವಿವಿಧ ಸ್ಥಳಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅನಧಿಕೃತವಾದ ವ್ಯವಹಾರ ಹಾಗೂ ಹಣ ದಾಸ್ತಾನು ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತೆರಿಗೆ ಪಾವತಿಸಿಯೇ ವ್ಯವಹಾರ ನಡೆಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕೆ ಧಾರಣೆ ಏರಿಕೆ ಬಳಿಕ ಇಂತಹ ಧಾಳಿಗಳು ಹೆಚ್ಚಾಗಿ ಕಂಡುಬಂದಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…