ಜಿ.ಎಸ್.ಟಿ ತೆರಿಗೆ ಹಣ ಪಾವತಿಸದೇ ಪಾನ್ ಮಸಲಾ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನಲೆಯಿಂದ ತೆರಿಗೆ ಹಾಗೂ ಡಿಜಿಜಿಐ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಈ ವೇಳೆ ಮನೆಗಳಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವ ನೋಟುಗಳ ಕಂತೆ ಪತ್ತೆಯಾಗಿದ್ದು ಸುಮಾರು 150 ಕೋಟಿ ರೂ ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್, ಮುಂಬೈ, ಗುಜರಾತ್ನ ವಿವಿಧ ಸ್ಥಳಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅನಧಿಕೃತವಾದ ವ್ಯವಹಾರ ಹಾಗೂ ಹಣ ದಾಸ್ತಾನು ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತೆರಿಗೆ ಪಾವತಿಸಿಯೇ ವ್ಯವಹಾರ ನಡೆಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕೆ ಧಾರಣೆ ಏರಿಕೆ ಬಳಿಕ ಇಂತಹ ಧಾಳಿಗಳು ಹೆಚ್ಚಾಗಿ ಕಂಡುಬಂದಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…