ಮುಂದಿನ 5 ವರ್ಷದಲ್ಲಿ ಭಾರತದ ಪಾನ್‌ ಮಸಾಲಾ ಉದ್ಯಮ 53 ಸಾವಿರ ಕೋಟಿಗೆ ತಲುಪುವ ನಿರೀಕ್ಷೆ | ಅಡಿಕೆ ಆಮದು ಸ್ಥಗಿತವಾದರೆ ಅಡಿಕೆ ಭವಿಷ್ಯ ಭದ್ರ… ? |

February 9, 2023
7:00 AM

ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು  ಬೆಳೆಯುತ್ತಿದ್ದು 2028 ರ ವೇಳೆಗೆ 53,672.3 ಕೋಟಿ ರೂಪಾಯಿಗೆ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಅಡಿಕೆ ಬೇಡಿಕೆಯೂ ಇರಲಿದೆ. ಆದರೆ ಅಡಿಕೆ ಆಮದು ಸ್ಥಗಿತವಾಗಬೇಕು, ಕನಿಷ್ಟ ಆಮದು ದರವೂ ಏರಿಕೆಯಾಗಬೇಕು. ಹೀಗಾದರೆ ಮಾತ್ರವೇ ಇದುವರೆಗೆ ಅಡಿಕೆ ಬೆಳೆ ವಿಸ್ತರಣೆಯಾಗಿರುವ ಪ್ರಮಾಣವು ಸರಿಹೊಂದಿ ಅಡಿಕೆ ಭವಿಷ್ಯ ಸ್ಥಿರವಾಗಲಿದೆ.

Advertisement
Advertisement

ಸಂಸ್ಥೆಯೊಂದರ ಇತ್ತೀಚಿನ ವರದಿಯ ಪ್ರಕಾರ, “ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯ ಅಧ್ಯಯನ ನಡೆಸಿತ್ತು. ಭಾರತದಲ್ಲಿ ಈಗಿನ ಮಾರುಕಟ್ಟೆ ಗಾತ್ರದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು 2022 ರ ಅವಧಿಯಲ್ಲಿ 43,410.2 ಕೋಟಿಗೆ ತಲುಪಿದೆ. ಆದರೆ  2028 ರ ವೇಳೆಗೆ ಮಾರುಕಟ್ಟೆಯು  53,672.3 ಕೋಟಿಗೆ ತಲುಪುತ್ತದೆ ಎಂದು ನಿರೀಕ್ಷಿಸಲಾಗಿದೆ. ಅಂದರೆ 2023-2028 ರ ಅವಧಿಯಲ್ಲಿ 3.4% ನ ಬೆಳವಣಿಗೆಯನ್ನು ನಿರೀಕ್ಷೆ ಮಾಡಲಾಗಿದೆ ಎಂದು ಸಂಶೋಧನಾ ಸಂಸ್ಥೆ ತಿಳಿಸಿದೆ.

Advertisement

ಪಾನ್ ಮಸಾಲವು ಅಡಿಕೆ ಸಹಿತ ಇತರ ಕೆಲವು ಉತ್ಪನ್ನಗಳನ್ನು ಒಳಗೊಂಡಿದೆ. ಭಾರತೀಯ ಪಾನ್ ಮಸಾಲಾ ಮಾರುಕಟ್ಟೆಯು ಬೆಳೆಯುತ್ತಲೇ ಇದೆ. ಸದ್ಯ ಬೇಡಿಕೆ ಹಾಗೂ ಪೂರೈಕೆಯಲ್ಲಿ ಕೊರತೆ ಇದೆ. ಇದಕ್ಕಾಗಿ ಅಡಿಕೆ ಆಮದು ಕೂಡಾ ನಡೆಯುತ್ತದೆ. ಆದರೆ ಭಾರತದಲ್ಲಿ ಪಾನ್‌ ಉದ್ಯಮ ಬೆಳೆಯುವ ವೇಳೆ ಅಡಿಕೆ ಬೇಡಿಕೆಯೂ ಹೆಚ್ಚಾಗಲಿದೆ. ಪ್ರಮುಖವಾಗಿ ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ಜಾರ್ಖಂಡ್‌ ಮೊದಲಾದ ಕಡೆಗಳಲ್ಲಿ ಅಡಿಕೆಯ ಬಳಕೆ ಹೆಚ್ಚುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಅಡಿಕೆ ಭವಿಷ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಮುಂದಿನ 4-5 ವರ್ಷದಲ್ಲಿ ಸುಮಾರು 3.4 ರಷ್ಟು ಪಾನ್‌ ಮಸಾಲಾ ಮಾರುಕಟ್ಟೆ ಬೆಳೆಯುತ್ತದೆ, ಅದೇ ಸಮಯಕ್ಕೆ ಸುಮಾರು ಶೇ.20 ರಷ್ಟು ಅಡಿಕೆ ಬೆಳೆ ವಿಸ್ತರಣೆ ಪ್ರದೇಶದ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡಲಿದೆ. ಹೀಗಾಗಿ ಬೇಡಿಕೆ ಮತ್ತು ಪೂರೈಕೆ ನಡುವೆ ವ್ಯತ್ಯಾಸದ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಈಗ ಅಡಿಕೆ ಆಮದು ದರ ಏರಿಕೆ, ಆಮದು ಸ್ಥಗಿತ ಕಡೆಗೆ ಸರ್ಕಾರವು ವಿಶೇಷ ಗಮನಹರಿಸಬೇಕಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |
July 26, 2024
12:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror