Advertisement
MIRROR FOCUS

ಮುಂದಿನ 5 ವರ್ಷದಲ್ಲಿ ಭಾರತದ ಪಾನ್‌ ಮಸಾಲಾ ಉದ್ಯಮ 53 ಸಾವಿರ ಕೋಟಿಗೆ ತಲುಪುವ ನಿರೀಕ್ಷೆ | ಅಡಿಕೆ ಆಮದು ಸ್ಥಗಿತವಾದರೆ ಅಡಿಕೆ ಭವಿಷ್ಯ ಭದ್ರ… ? |

Share

ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು  ಬೆಳೆಯುತ್ತಿದ್ದು 2028 ರ ವೇಳೆಗೆ 53,672.3 ಕೋಟಿ ರೂಪಾಯಿಗೆ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಅಡಿಕೆ ಬೇಡಿಕೆಯೂ ಇರಲಿದೆ. ಆದರೆ ಅಡಿಕೆ ಆಮದು ಸ್ಥಗಿತವಾಗಬೇಕು, ಕನಿಷ್ಟ ಆಮದು ದರವೂ ಏರಿಕೆಯಾಗಬೇಕು. ಹೀಗಾದರೆ ಮಾತ್ರವೇ ಇದುವರೆಗೆ ಅಡಿಕೆ ಬೆಳೆ ವಿಸ್ತರಣೆಯಾಗಿರುವ ಪ್ರಮಾಣವು ಸರಿಹೊಂದಿ ಅಡಿಕೆ ಭವಿಷ್ಯ ಸ್ಥಿರವಾಗಲಿದೆ.

ಸಂಸ್ಥೆಯೊಂದರ ಇತ್ತೀಚಿನ ವರದಿಯ ಪ್ರಕಾರ, “ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯ ಅಧ್ಯಯನ ನಡೆಸಿತ್ತು. ಭಾರತದಲ್ಲಿ ಈಗಿನ ಮಾರುಕಟ್ಟೆ ಗಾತ್ರದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು 2022 ರ ಅವಧಿಯಲ್ಲಿ 43,410.2 ಕೋಟಿಗೆ ತಲುಪಿದೆ. ಆದರೆ  2028 ರ ವೇಳೆಗೆ ಮಾರುಕಟ್ಟೆಯು  53,672.3 ಕೋಟಿಗೆ ತಲುಪುತ್ತದೆ ಎಂದು ನಿರೀಕ್ಷಿಸಲಾಗಿದೆ. ಅಂದರೆ 2023-2028 ರ ಅವಧಿಯಲ್ಲಿ 3.4% ನ ಬೆಳವಣಿಗೆಯನ್ನು ನಿರೀಕ್ಷೆ ಮಾಡಲಾಗಿದೆ ಎಂದು ಸಂಶೋಧನಾ ಸಂಸ್ಥೆ ತಿಳಿಸಿದೆ.

ಪಾನ್ ಮಸಾಲವು ಅಡಿಕೆ ಸಹಿತ ಇತರ ಕೆಲವು ಉತ್ಪನ್ನಗಳನ್ನು ಒಳಗೊಂಡಿದೆ. ಭಾರತೀಯ ಪಾನ್ ಮಸಾಲಾ ಮಾರುಕಟ್ಟೆಯು ಬೆಳೆಯುತ್ತಲೇ ಇದೆ. ಸದ್ಯ ಬೇಡಿಕೆ ಹಾಗೂ ಪೂರೈಕೆಯಲ್ಲಿ ಕೊರತೆ ಇದೆ. ಇದಕ್ಕಾಗಿ ಅಡಿಕೆ ಆಮದು ಕೂಡಾ ನಡೆಯುತ್ತದೆ. ಆದರೆ ಭಾರತದಲ್ಲಿ ಪಾನ್‌ ಉದ್ಯಮ ಬೆಳೆಯುವ ವೇಳೆ ಅಡಿಕೆ ಬೇಡಿಕೆಯೂ ಹೆಚ್ಚಾಗಲಿದೆ. ಪ್ರಮುಖವಾಗಿ ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ಜಾರ್ಖಂಡ್‌ ಮೊದಲಾದ ಕಡೆಗಳಲ್ಲಿ ಅಡಿಕೆಯ ಬಳಕೆ ಹೆಚ್ಚುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಅಡಿಕೆ ಭವಿಷ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಮುಂದಿನ 4-5 ವರ್ಷದಲ್ಲಿ ಸುಮಾರು 3.4 ರಷ್ಟು ಪಾನ್‌ ಮಸಾಲಾ ಮಾರುಕಟ್ಟೆ ಬೆಳೆಯುತ್ತದೆ, ಅದೇ ಸಮಯಕ್ಕೆ ಸುಮಾರು ಶೇ.20 ರಷ್ಟು ಅಡಿಕೆ ಬೆಳೆ ವಿಸ್ತರಣೆ ಪ್ರದೇಶದ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡಲಿದೆ. ಹೀಗಾಗಿ ಬೇಡಿಕೆ ಮತ್ತು ಪೂರೈಕೆ ನಡುವೆ ವ್ಯತ್ಯಾಸದ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಈಗ ಅಡಿಕೆ ಆಮದು ದರ ಏರಿಕೆ, ಆಮದು ಸ್ಥಗಿತ ಕಡೆಗೆ ಸರ್ಕಾರವು ವಿಶೇಷ ಗಮನಹರಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

7 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

17 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

18 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

22 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago