Advertisement
MIRROR FOCUS

ಮುಂದಿನ 5 ವರ್ಷದಲ್ಲಿ ಭಾರತದ ಪಾನ್‌ ಮಸಾಲಾ ಉದ್ಯಮ 53 ಸಾವಿರ ಕೋಟಿಗೆ ತಲುಪುವ ನಿರೀಕ್ಷೆ | ಅಡಿಕೆ ಆಮದು ಸ್ಥಗಿತವಾದರೆ ಅಡಿಕೆ ಭವಿಷ್ಯ ಭದ್ರ… ? |

Share

ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು  ಬೆಳೆಯುತ್ತಿದ್ದು 2028 ರ ವೇಳೆಗೆ 53,672.3 ಕೋಟಿ ರೂಪಾಯಿಗೆ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಅಡಿಕೆ ಬೇಡಿಕೆಯೂ ಇರಲಿದೆ. ಆದರೆ ಅಡಿಕೆ ಆಮದು ಸ್ಥಗಿತವಾಗಬೇಕು, ಕನಿಷ್ಟ ಆಮದು ದರವೂ ಏರಿಕೆಯಾಗಬೇಕು. ಹೀಗಾದರೆ ಮಾತ್ರವೇ ಇದುವರೆಗೆ ಅಡಿಕೆ ಬೆಳೆ ವಿಸ್ತರಣೆಯಾಗಿರುವ ಪ್ರಮಾಣವು ಸರಿಹೊಂದಿ ಅಡಿಕೆ ಭವಿಷ್ಯ ಸ್ಥಿರವಾಗಲಿದೆ.

ಸಂಸ್ಥೆಯೊಂದರ ಇತ್ತೀಚಿನ ವರದಿಯ ಪ್ರಕಾರ, “ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯ ಅಧ್ಯಯನ ನಡೆಸಿತ್ತು. ಭಾರತದಲ್ಲಿ ಈಗಿನ ಮಾರುಕಟ್ಟೆ ಗಾತ್ರದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು 2022 ರ ಅವಧಿಯಲ್ಲಿ 43,410.2 ಕೋಟಿಗೆ ತಲುಪಿದೆ. ಆದರೆ  2028 ರ ವೇಳೆಗೆ ಮಾರುಕಟ್ಟೆಯು  53,672.3 ಕೋಟಿಗೆ ತಲುಪುತ್ತದೆ ಎಂದು ನಿರೀಕ್ಷಿಸಲಾಗಿದೆ. ಅಂದರೆ 2023-2028 ರ ಅವಧಿಯಲ್ಲಿ 3.4% ನ ಬೆಳವಣಿಗೆಯನ್ನು ನಿರೀಕ್ಷೆ ಮಾಡಲಾಗಿದೆ ಎಂದು ಸಂಶೋಧನಾ ಸಂಸ್ಥೆ ತಿಳಿಸಿದೆ.

ಪಾನ್ ಮಸಾಲವು ಅಡಿಕೆ ಸಹಿತ ಇತರ ಕೆಲವು ಉತ್ಪನ್ನಗಳನ್ನು ಒಳಗೊಂಡಿದೆ. ಭಾರತೀಯ ಪಾನ್ ಮಸಾಲಾ ಮಾರುಕಟ್ಟೆಯು ಬೆಳೆಯುತ್ತಲೇ ಇದೆ. ಸದ್ಯ ಬೇಡಿಕೆ ಹಾಗೂ ಪೂರೈಕೆಯಲ್ಲಿ ಕೊರತೆ ಇದೆ. ಇದಕ್ಕಾಗಿ ಅಡಿಕೆ ಆಮದು ಕೂಡಾ ನಡೆಯುತ್ತದೆ. ಆದರೆ ಭಾರತದಲ್ಲಿ ಪಾನ್‌ ಉದ್ಯಮ ಬೆಳೆಯುವ ವೇಳೆ ಅಡಿಕೆ ಬೇಡಿಕೆಯೂ ಹೆಚ್ಚಾಗಲಿದೆ. ಪ್ರಮುಖವಾಗಿ ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ಜಾರ್ಖಂಡ್‌ ಮೊದಲಾದ ಕಡೆಗಳಲ್ಲಿ ಅಡಿಕೆಯ ಬಳಕೆ ಹೆಚ್ಚುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಅಡಿಕೆ ಭವಿಷ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಮುಂದಿನ 4-5 ವರ್ಷದಲ್ಲಿ ಸುಮಾರು 3.4 ರಷ್ಟು ಪಾನ್‌ ಮಸಾಲಾ ಮಾರುಕಟ್ಟೆ ಬೆಳೆಯುತ್ತದೆ, ಅದೇ ಸಮಯಕ್ಕೆ ಸುಮಾರು ಶೇ.20 ರಷ್ಟು ಅಡಿಕೆ ಬೆಳೆ ವಿಸ್ತರಣೆ ಪ್ರದೇಶದ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡಲಿದೆ. ಹೀಗಾಗಿ ಬೇಡಿಕೆ ಮತ್ತು ಪೂರೈಕೆ ನಡುವೆ ವ್ಯತ್ಯಾಸದ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಈಗ ಅಡಿಕೆ ಆಮದು ದರ ಏರಿಕೆ, ಆಮದು ಸ್ಥಗಿತ ಕಡೆಗೆ ಸರ್ಕಾರವು ವಿಶೇಷ ಗಮನಹರಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago