Advertisement
MIRROR FOCUS

ಮುಂದಿನ 5 ವರ್ಷದಲ್ಲಿ ಭಾರತದ ಪಾನ್‌ ಮಸಾಲಾ ಉದ್ಯಮ 53 ಸಾವಿರ ಕೋಟಿಗೆ ತಲುಪುವ ನಿರೀಕ್ಷೆ | ಅಡಿಕೆ ಆಮದು ಸ್ಥಗಿತವಾದರೆ ಅಡಿಕೆ ಭವಿಷ್ಯ ಭದ್ರ… ? |

Share

ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು  ಬೆಳೆಯುತ್ತಿದ್ದು 2028 ರ ವೇಳೆಗೆ 53,672.3 ಕೋಟಿ ರೂಪಾಯಿಗೆ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಅಡಿಕೆ ಬೇಡಿಕೆಯೂ ಇರಲಿದೆ. ಆದರೆ ಅಡಿಕೆ ಆಮದು ಸ್ಥಗಿತವಾಗಬೇಕು, ಕನಿಷ್ಟ ಆಮದು ದರವೂ ಏರಿಕೆಯಾಗಬೇಕು. ಹೀಗಾದರೆ ಮಾತ್ರವೇ ಇದುವರೆಗೆ ಅಡಿಕೆ ಬೆಳೆ ವಿಸ್ತರಣೆಯಾಗಿರುವ ಪ್ರಮಾಣವು ಸರಿಹೊಂದಿ ಅಡಿಕೆ ಭವಿಷ್ಯ ಸ್ಥಿರವಾಗಲಿದೆ.

ಸಂಸ್ಥೆಯೊಂದರ ಇತ್ತೀಚಿನ ವರದಿಯ ಪ್ರಕಾರ, “ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯ ಅಧ್ಯಯನ ನಡೆಸಿತ್ತು. ಭಾರತದಲ್ಲಿ ಈಗಿನ ಮಾರುಕಟ್ಟೆ ಗಾತ್ರದಲ್ಲಿ ಪಾನ್ ಮಸಾಲಾ ಮಾರುಕಟ್ಟೆಯು 2022 ರ ಅವಧಿಯಲ್ಲಿ 43,410.2 ಕೋಟಿಗೆ ತಲುಪಿದೆ. ಆದರೆ  2028 ರ ವೇಳೆಗೆ ಮಾರುಕಟ್ಟೆಯು  53,672.3 ಕೋಟಿಗೆ ತಲುಪುತ್ತದೆ ಎಂದು ನಿರೀಕ್ಷಿಸಲಾಗಿದೆ. ಅಂದರೆ 2023-2028 ರ ಅವಧಿಯಲ್ಲಿ 3.4% ನ ಬೆಳವಣಿಗೆಯನ್ನು ನಿರೀಕ್ಷೆ ಮಾಡಲಾಗಿದೆ ಎಂದು ಸಂಶೋಧನಾ ಸಂಸ್ಥೆ ತಿಳಿಸಿದೆ.

Advertisement

ಪಾನ್ ಮಸಾಲವು ಅಡಿಕೆ ಸಹಿತ ಇತರ ಕೆಲವು ಉತ್ಪನ್ನಗಳನ್ನು ಒಳಗೊಂಡಿದೆ. ಭಾರತೀಯ ಪಾನ್ ಮಸಾಲಾ ಮಾರುಕಟ್ಟೆಯು ಬೆಳೆಯುತ್ತಲೇ ಇದೆ. ಸದ್ಯ ಬೇಡಿಕೆ ಹಾಗೂ ಪೂರೈಕೆಯಲ್ಲಿ ಕೊರತೆ ಇದೆ. ಇದಕ್ಕಾಗಿ ಅಡಿಕೆ ಆಮದು ಕೂಡಾ ನಡೆಯುತ್ತದೆ. ಆದರೆ ಭಾರತದಲ್ಲಿ ಪಾನ್‌ ಉದ್ಯಮ ಬೆಳೆಯುವ ವೇಳೆ ಅಡಿಕೆ ಬೇಡಿಕೆಯೂ ಹೆಚ್ಚಾಗಲಿದೆ. ಪ್ರಮುಖವಾಗಿ ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ಜಾರ್ಖಂಡ್‌ ಮೊದಲಾದ ಕಡೆಗಳಲ್ಲಿ ಅಡಿಕೆಯ ಬಳಕೆ ಹೆಚ್ಚುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಅಡಿಕೆ ಭವಿಷ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಮುಂದಿನ 4-5 ವರ್ಷದಲ್ಲಿ ಸುಮಾರು 3.4 ರಷ್ಟು ಪಾನ್‌ ಮಸಾಲಾ ಮಾರುಕಟ್ಟೆ ಬೆಳೆಯುತ್ತದೆ, ಅದೇ ಸಮಯಕ್ಕೆ ಸುಮಾರು ಶೇ.20 ರಷ್ಟು ಅಡಿಕೆ ಬೆಳೆ ವಿಸ್ತರಣೆ ಪ್ರದೇಶದ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡಲಿದೆ. ಹೀಗಾಗಿ ಬೇಡಿಕೆ ಮತ್ತು ಪೂರೈಕೆ ನಡುವೆ ವ್ಯತ್ಯಾಸದ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಈಗ ಅಡಿಕೆ ಆಮದು ದರ ಏರಿಕೆ, ಆಮದು ಸ್ಥಗಿತ ಕಡೆಗೆ ಸರ್ಕಾರವು ವಿಶೇಷ ಗಮನಹರಿಸಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago