Advertisement
Opinion

#Panchakarma | ಪಂಚಕರ್ಮ ಇದು ಆಯುರ್ವೇದದ ಒಂದು ಶ್ರೇಷ್ಠ ಚಿಕಿತ್ಸಾ ವಿಧಾನ | ಇದರಿಂದ ಆಗುವ ಪ್ರಯೋಜನಗಳೇನು..?

Share

ಆಯುರ್ವೇದ ಎಂಬುದು ಜೀವನವಿಧಾನ ಮಾತ್ರವಲ್ಲ, ಅದು ವಿಜ್ಞಾನ ಕೂಡಾ. ಇದು ಕಾಯಿಲೆಗಳ ವಿರುದ್ಧ ಚಿಕಿತ್ಸಾತ್ಮಕ ಹಾಗೂ ಮುಂಜಾಗೃತಾ ಕ್ರಮಗಳ ಕಡೆ ಗಮನ ಹರಿಸುವುದರೊಂದಿಗೆ ದೇಹವನ್ನು ಒಳಗಿನಿಂದ ಶುದ್ಧಿಗೊಳಿಸುವ ಹಾಗೂ ನವಚೈತನ್ಯ ಕಾಯ್ದಿರಿಸುವ ಕೆಲಸವನ್ನೂ ಮಾಡುತ್ತದೆ. ಈ ಆಯುರ್ವೇದದ ಪ್ರಮುಖ ಚಿಕಿತ್ಸೆಯಾದ ಪಂಚಕರ್ಮ ಚಿಕಿತ್ಸೆಯು ದೇಹ, ಮನಸ್ಸು ಹಾಗೂ ಆತ್ಮವನ್ನು ಸಮತೋಲನವಾಗಿ ಕಾಪಾಡುವ ಗುರಿ ಹೊಂದಿದೆ. ಇದು ಕೇವಲ ರೋಗಿಗಳಲ್ಲದೆ ಆರೋಗ್ಯವಂತರು ಕೂಡಾ ಪಡೆಯಬಹುದಾದ ಚಿಕಿತ್ಸೆ. ದೇಹದಿಂದ ಟಾಕ್ಸಿನ್ಸ್ ಹೊರತೆಗೆದು, ಕಟ್ಟಿಕೊಂಡ ನಾಳಗಳನ್ನು ಸ್ವಚ್ಛತೆ, ಜೀರ್ಣಕ್ರಿಯೆ ಸರಾಗ, ಮೆಟಾಬಾಲಿಸಂ ಹೆಚ್ಚಳ, ತೂಕ ಇಳಿಕೆ, ಒತ್ತಡ ಶಮನ, ರೋಗ ನಿರೋಧಕ ಶಕ್ತಿ ಹೆಚ್ಚಳ ಮುಂತಾದ ಆರೋಗ್ಯ ಲಾಭಗಳು ಪಂಚಕರ್ಮದಿಂದ ಸಿಗುತ್ತವೆ.

Advertisement

ನಮ್ಮ ಶರೀರದ ತ್ರಿದೋಷಗಳಾದ ವಾತ ಪಿತ್ತ ಕಫಗಳನ್ನು ಹೊರತೆಗೆದು ದೇಹದ ಸಪ್ತ ಧಾತುಗಳನ್ನು ಬಲಪಡಿಸುವ ಪ್ರಕ್ರಿಯೆ ಪಂಚಕರ್ಮ ಚಿಕಿತ್ಸೆ. ಪಂಚಕರ್ಮ ಹೆಸರೇ ಸೂಚಿಸುವಂತೆ 5 ಕರ್ಮಗಳು ( 5 procedures ) ಎಂದರ್ಥ. ಮಾನವ ದೇಹದಿಂದ ಕಲ್ಮಶಗಳನ್ನು ತೆಗೆದು ಹಾಕುವಲ್ಲಿ ಸಹಾಯ ಮಾಡುವ ಔಷಧೀಯ ತೈಲಗಳ ಬಳಕೆಯಿಂದ ಪಂಚಕರ್ಮವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

5 ಪಂಚಕರ್ಮ ಚಿಕಿತ್ಸೆಗಳು :

1. ವಮನ ( ವಾಂತಿ ಮಾಡಿಸುವುದು /vomitting therapy )

2. ವಿರೇಚನ( ಭೇದಿ ಮಾಡಿಸುವ ಕ್ರಿಯೆ /purgation therapy)

3. ಬಸ್ತಿ ಚಿಕಿತ್ಸೆ (ಎನಿಮಾ /enema therapy )

4. ನಸ್ಯ (Nasal therapy )

5. ರಕ್ತಮೋಕ್ಷಣ (Leach therapy )

ಪಂಚಕರ್ಮ ಚಿಕಿತ್ಸೆ ಮಾಡುವಾಗ ರೋಗಿಯನ್ನು ಸಂಪೂರ್ಣವಾಗಿ ಪರೀಕ್ಷೆ ಮಾಡಬೇಕಾಗುತ್ತದೆ ಈ ಚಿಕಿತ್ಸೆಯಲ್ಲಿ ಪೂರ್ವ ಕರ್ಮ ಪ್ರಧಾನ ಕರ್ಮ ಪಶ್ಚಾತ್ ಕರ್ಮ  ಅನುಸರಿಸಬೇಕಾಗುತ್ತದೆ . ಆದ ಕಾರಣ ನುರಿತ ವೈದ್ಯರೊಂದಿಗೆ ಸಮಾಲೋಚನೆ ಮಾಡಿ ಅವರ ಸಲಹೆ ಮೇರೆಗೆ ಪಂಚ ಕರ್ಮ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ

ಕೆಲವೊಂದು ಸಾಮಾನ್ಯ ಪಂಚಕರ್ಮ  ಚಿಕಿತ್ಸೆಗಳು : ಅಭ್ಯಂಗ.. ಗಿಡಮೂಲಿಕೆಗಳಿಂದ ತಯಾರಿಸಿದ ತೈಲಗಳಿಂದ ಮಸಾಜ್ ಮಾಡುವುದು. ಸಾಮಾನ್ಯವಾಗಿ ಎಲ್ಲಾ ಪಂಚಕರ್ಮದ ಪೂರ್ವ ಕರ್ಮವಾಗಿ ಮಾಡಲಾಗುತ್ತದೆ ಹಾಗೂ ಶರೀರದ ಮೈ ಕೈ ನೋವುಗಳನ್ನು ಕಡಿಮೆ ಮಾಡುತ್ತದೆ. ಶಿರೋಭ್ಯಂಗ   ಪಾದಾಭ್ಯಂಗ ಹಲವು ವಿಧಾನಗಳಿವೆ

* ಶಿರೋಧಾರ – ನಿದ್ರಾಹೀನತೆ  ಹಾಗೂ ಮಾನಸಿಕ ಒತ್ತಡಗಳನ್ನು ಕಡಿಮೆ ಮಾಡಲು ಉತ್ತಮ ಚಿಕಿತ್ಸೆ

*ಉದ್ವರ್ತನ – (Powder massage)  – ತೂಕ ಕಡಿಮೆ  ಮಾಡಲು

* ಜಾನು ಬಸ್ತಿ  ಕಟಿ ಬಸ್ತಿ – ನೋವು ನಿವಾರಿಸುವ   ಅನೇಕ ಚಿಕಿತ್ಸೆ ಗಳು ಈ ಪಂಚಕರ್ಮ ಚಿಕಿತ್ಸಾ ವಿಧಾನದಲ್ಲಿ   ಮಾಡಬಹುದು

*ಅಕ್ಷಿತಾರ್ಪಣ – ಕಣ್ಣಿನ ಚಿಕಿತ್ಸೆ

*ಕರ್ಣಪೂರಣ – ಕಿವಿಯ ಸಮಸ್ಯೆಗಳ  ಚಿಕಿತ್ಸೆ

ಯಾವುದೇ ಪಂಚಕರ್ಮ ಚಿಕಿತ್ಸೆ ಮಾಡಬೇಕಾದಲ್ಲಿ ಆಹಾರ ಮತ್ತು ವಿಹಾರದಲ್ಲಿ ಪಥ್ಯವನ್ನು (Diet) ಅನುಸರಿಸಬೇಕು… ಹಾಗೂ ವೈದ್ಯರ ಸಮ್ಮುಖದಲ್ಲೆ ಚಿಕಿತ್ಸೆ ಮಾಡಬೇಕಾಗುತ್ತದೆ

 ಪ್ರಯೋಜನ

* ದೇಹದ ಸಂಪೂರ್ಣ ಶುದ್ಧೀಕರಣ

*ಅಂಗಾಂಗಗಳ ಪುನರ್ ಯೌವನಗೊಳಿಸುವದು

*ಮನಸ್ಸು ದೇಹದ ವಿಶ್ರಾಂತಿ

*ಜೀರ್ಣ ಕ್ರಿಯೆಯನ್ನು ಬಲಗೊಳಿಸುವುದು

*ಮಾಂಸ ಖಂಡ ಹಾಗೂ ನರಗಳನ್ನು ಬಲಿಷ್ಠ ಗೊಳಿಸುವುದು

*ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು

*ಮಾನಸಿಕ ಒತ್ತಡಗಳನ್ನು ಹೋಗಲಾಡಿಸುವುದು

Source : Online

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

37 minutes ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

15 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

16 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

16 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

16 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

16 hours ago