ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…