ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.
ಒಂದು ದೇವಸ್ಥಾನದ ಎಂದರೆ ಶ್ರದ್ಧೆಯ ಕೇಂದ್ರ, ಒಂದು ಊರಿನ ದೇವಸ್ಥಾನ ಎಂದರೆ ಸೌಹಾದರ್ತೆಯ…
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…