ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…
ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…
ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…