ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…