ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…