ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…