Advertisement
ಸುದ್ದಿಗಳು

ಗಾಂಧಿ ಜಯಂತಿ | ಪಂಜದಲ್ಲಿ ಗ್ರಾಮ ಸ್ವರಾಜ್ಯಕ್ಕಾಗಿ ಉಪವಾಸ ಸತ್ಯಾಗ್ರಹ |

Share
ಗಾಂಧೀ ಜಯಂತಿ ಪ್ರಯುಕ್ತ ಅ.2  ರಂದು ಬೆಳಗ್ಗೆ ಧ್ವಜಾರೋಹಣದ ಬಳಿಕ ಗ್ರಾಮ ಸ್ವರಾಜ್ಯಕ್ಕಾಗಿ  ಪಂಜ ಗ್ರಾಪಂ ಮುಂದೆ ವಿವಿಧ ಬೇಡಿಕೆ ಮುಂದಿರಿಸಿ ಉಪವಾಸ ಸತ್ಯಾಗ್ರಹ ಪಂಜ ಮಹಾತ್ಮಾಗಾಂಧಿ  ವಿದ್ಯಾಪೀಠ ಹಾಗೂ ಪಂಜ ಗ್ರಾಮ ಸ್ವರಾಜ್ಯ ತಂಡದ ವತಿಯಿಂದ  ನಡೆಯಲಿದೆ ಎಂದು ಪುರುಷೋತ್ತಮ ಮುಡೂರು ಹಾಗೂ ಜಿನ್ನಪ್ಪ ಅಳ್ಪೆ ತಿಳಿಸಿದ್ದಾರೆ.
ಗಾಂಧಿ ಜಯಂತಿಯಂದು ಬೆಳಗ್ಗೆ 8.30 ರಿಂದ ಸಂಜೆ 4 ರ ತನಕ ಪಂಜದಲ್ಲಿರುವ ಗ್ರಾಮದ ವಿಧಾನಸೌಧ ಎದುರುಗಡೆ ಉಪವಾಸ ಸತ್ಯಾಗ್ರಹ ನಡೆಯಲಿದೆ. ಪಂಜ ಹೋಬಳಿ ಕೇಂದ್ರದಲ್ಲಿ ಇರುವಂತಹ ಇಲಾಖೆಗಳ ಬಗ್ಗೆ ಸರಕಾರಕ್ಕೆ ಹಕ್ಕೊತ್ತಾಯದ ಕುರಿತು ಕಾರ್ಯ ನಿರ್ವಹಿಸುವ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಎಲ್ಲಾ ಸೌಲಭ್ಯಗಳು ದೊರಕಿಸಿಕೊಡುವುದು ಗ್ರಾಮಸ್ವರಾಜ್ ಪಂಜ ಇದರ ಮೂಲ ಉದ್ದೇಶವಾಗಿದೆ.
ಸರಕಾರದಿಂದ ಸಿಗುವಂತಹ ಸೌಲಭ್ಯಗಳ ವಂಚನೆಯು ನಡೆದಿದೆ ಮತ್ತು ಹೋಬಳಿ ಕೇಂದ್ರದಲ್ಲಿ ಇರುವಂತಹ ಸೇವೆ ಅಂಚೆ ಇಲಾಖೆ ಪೊಲೀಸ್ ಸ್ಟೇಷನ್ ನೀರಿನ ಸೌಲಭ್ಯ , ಇಂಟರ್ನೆಟ್,  ವಿದ್ಯುತ್ , ಆರೋಗ್ಯ ಕೇಂದ್ರ , ಶೈಕ್ಷಣಿಕ ಕೇಂದ್ರಗಳು,  ಬ್ಯಾಂಕ್ ವ್ಯವಹಾರಗಳು,  ರಸ್ತೆ ಸಾರಿಗೆ ವ್ಯವಸ್ಥೆಗಳು,  ಸ್ವಚ್ಛತೆ,  ಶೌಚಾಲಯ,  ಪಶುಸಂಗೋಪನೆ,  ಕಾಲುದಾರಿಗಳ ಸಮಸ್ಯೆಗಳು,  ಕುಡಿಯುವ ನೀರಿನ ಸಮಸ್ಯೆಗಳು,  ಇತರ ಸೌಲಭ್ಯಗಳ ಬಗ್ಗೆ ಸೂಕ್ಷ್ಮವಾಗಿ ಜನರೊಂದಿಗೆ ಮಾತುಕತೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರಕಾರಕ್ಕೆ ಮುಟ್ಟಿಸುವ ವ್ಯವಸ್ಥೆ ಮಾಡಿಕೊಡಬೇಕಾಗಿದೆ. ಸತ್ಯಾಗ್ರಹದಲ್ಲಿ ಸಾರ್ವಜನಿಕರು ಯಾವುದೇ ಸಮಸ್ಯೆಗಳನ್ನು ನೀಡಬಹುದು ಎಂದು ಪ್ರಕಟಣೆಯಲ್ಲಿ ಮಹಾತ್ಮಾಗಾಂಧಿ  ವಿದ್ಯಾಪೀಠದ ಪುರುಷೋತ್ತಮ ಮುಡೂರು ಹಾಗೂ ಗ್ರಾಮಸ್ವರಾಜ್ ತಂಡ ಮುಖಂಡ, ಸಾಮಾಜಿಕ ಕಾರ್ಯಕರ್ತ  ಜಿನ್ನಪ್ಪ ಅಳ್ಪೆ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

18 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

18 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

20 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

20 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago