Advertisement
ಸುದ್ದಿಗಳು

ಅ.15 ರಿಂದ ಪಂಜ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | 9 ದಿನಗಳ ಕಲಾಸೇವೆ |

Share

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ. ಈ ಸಂದರ್ಭ 9 ದಿನಗಳ ಕಾಲ ವಿವಿಧ ಕಲಾವಿದರಿಂದ ಕಲಾಸೇವೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

ಅ.15 ರಿಂದ 23 ವರೆಗೆ ಪಂಜ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾದಿಗಳು ಹಾಗೂ ವಿಶೇಷ ಕಲಾ ಪ್ರಕಾರಗಳ ಸೇವೆಗಳು ಜರಗಲಿದೆ.

ನವರಾತ್ರಿ ಪೂಜಾ ಸಮಯದಲ್ಲಿ ಅಮ್ಮನವರಿಗೆ ಕಲಾ ಸೇವೆ ಹಲವು ಮಂದಿ ನೀಡಲಿದ್ದಾರೆ. ಅ.15 ರಂದು ಚೆಂಡೆ : ಸುಬ್ರಹ್ಮಣ್ಯ ಭಟ್ ದೇವಸ್ಯ ಅವರಿಂದ, ಅ.16 ರಂದು ತಬಲಾ : ಎನ್.ಪಿ. ಪವನ್ ಆಚಾರ್ ಅವರಿಂದ, ಅ.17 ರಂದುವೇದಮಂತ್ರ : ವೈದಿಕರಿಂದ, ಅ.18 ರಂದು ಯಕ್ಷ-ಗಾನ : ಗೋಪಾಲಕೃಷ್ಣ ಭಟ್ ದೇವಸ್ಯ, ಸುಭಾಷ್‌ ಪಂಜ, ರಚನಾ ಚಿತ್ಕಲ್, ಸುಬ್ರಹ್ಮಣ್ಯ ಭಟ್ ದೇವಸ್ಯ, ಲಕ್ಷ್ಮೀಶ ಶಗ್ರಿತ್ತಾಯ, ಗಗನ್ ಪಂಜ ಮತ್ತು ಇತರರಿಂದ, ಅ.19 ರಂದು ಭರತನಾಟ್ಯ : ಸರಯು ವಿ. ಮುಚ್ಚಲ, ಶಂಖನಾದ : ಸುಂದರ ದೇವಾಡಿಗ, ಅ.20 ರಂದು ವೇಣುವಾದನ : ರಾಮಚಂದ್ರ ಕಲ್ಕಣ್ಣ ಮತ್ತು ತಂಡದವರು, ಅ.21 ರಂದು ಭರತನಾಟ್ಯ : ವಸುಧಾ ಬಿ. ಮುಚ್ಚಿಲ, ಸ್ತುತಿ ರೈ ಅಡ್ಡಬೈಲು ಅವರಿಂದ, ಅ.22 ರಂದು ಭಕ್ತಿ ಸಂಗೀತ : ಸುಮಾ ಕೋಟೆ ಅವರಿಂದ, ಅ.23 ರಂದು ಪುರಾಣ ವಾಚನ : ಕೃಷ್ಣ ಭಟ್ ಸಂಪ ಅವರಿಂದ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 hour ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 hour ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

13 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago