ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ. ಈ ಸಂದರ್ಭ 9 ದಿನಗಳ ಕಾಲ ವಿವಿಧ ಕಲಾವಿದರಿಂದ ಕಲಾಸೇವೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.
ಅ.15 ರಿಂದ 23 ವರೆಗೆ ಪಂಜ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾದಿಗಳು ಹಾಗೂ ವಿಶೇಷ ಕಲಾ ಪ್ರಕಾರಗಳ ಸೇವೆಗಳು ಜರಗಲಿದೆ.
ನವರಾತ್ರಿ ಪೂಜಾ ಸಮಯದಲ್ಲಿ ಅಮ್ಮನವರಿಗೆ ಕಲಾ ಸೇವೆ ಹಲವು ಮಂದಿ ನೀಡಲಿದ್ದಾರೆ. ಅ.15 ರಂದು ಚೆಂಡೆ : ಸುಬ್ರಹ್ಮಣ್ಯ ಭಟ್ ದೇವಸ್ಯ ಅವರಿಂದ, ಅ.16 ರಂದು ತಬಲಾ : ಎನ್.ಪಿ. ಪವನ್ ಆಚಾರ್ ಅವರಿಂದ, ಅ.17 ರಂದುವೇದಮಂತ್ರ : ವೈದಿಕರಿಂದ, ಅ.18 ರಂದು ಯಕ್ಷ-ಗಾನ : ಗೋಪಾಲಕೃಷ್ಣ ಭಟ್ ದೇವಸ್ಯ, ಸುಭಾಷ್ ಪಂಜ, ರಚನಾ ಚಿತ್ಕಲ್, ಸುಬ್ರಹ್ಮಣ್ಯ ಭಟ್ ದೇವಸ್ಯ, ಲಕ್ಷ್ಮೀಶ ಶಗ್ರಿತ್ತಾಯ, ಗಗನ್ ಪಂಜ ಮತ್ತು ಇತರರಿಂದ, ಅ.19 ರಂದು ಭರತನಾಟ್ಯ : ಸರಯು ವಿ. ಮುಚ್ಚಲ, ಶಂಖನಾದ : ಸುಂದರ ದೇವಾಡಿಗ, ಅ.20 ರಂದು ವೇಣುವಾದನ : ರಾಮಚಂದ್ರ ಕಲ್ಕಣ್ಣ ಮತ್ತು ತಂಡದವರು, ಅ.21 ರಂದು ಭರತನಾಟ್ಯ : ವಸುಧಾ ಬಿ. ಮುಚ್ಚಿಲ, ಸ್ತುತಿ ರೈ ಅಡ್ಡಬೈಲು ಅವರಿಂದ, ಅ.22 ರಂದು ಭಕ್ತಿ ಸಂಗೀತ : ಸುಮಾ ಕೋಟೆ ಅವರಿಂದ, ಅ.23 ರಂದು ಪುರಾಣ ವಾಚನ : ಕೃಷ್ಣ ಭಟ್ ಸಂಪ ಅವರಿಂದ ನಡೆಯಲಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…