ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ ಒಡೆಯ ಪಂಜದ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯುತ್ತದೆ. ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತವು ಪ್ರತೀ ವರ್ಷ ಈ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದೆ.
ಪಂಜ ಸೀಮೆಯ, ಇಡೀ ಸುಳ್ಯ ತಾಲೂಕು ಹಾಗೂ ಕಡಬ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ನಡೆಯುವ ಮುನ್ನ ಅಂದರೆ ಫೆ. 2 ರಂದು ಮೂಲ ನಾಗ ತೀರ್ಥದಲ್ಲಿ ಪೂಜೆ ನಡೆಯುತ್ತದೆ. ಬಂಟಮಲೆಯ ಕಾಡಿನ ತಪ್ಪಲು ಪ್ರದೇಶವಾದ ಈ ಜಾಗದಲ್ಲಿ ಅಂದರೆ ಗಧಾತೀರ್ಥ ಪ್ರದೇಶ ನೀರಿನ ಮೂಲಕ್ಕೆ ಪೂಜೆ ನಡೆಯುತ್ತದೆ. ಅದಾದ ಬಳಿಕ ತೀರ್ಥವನ್ನು ದೇವಸ್ಥಾನಕ್ಕೆ ತರಲಾಗುತ್ತದೆ. ಈ ಮೂಲಕ ಪ್ರಕೃತಿಯ ಆರಾಧನೆ ನಡೆಯುತ್ತದೆ. ದೇವಸ್ಥಾನದ ಅರ್ಚಕರು, ತಂತ್ರಿಗಳು ಪೂಜೆ ಕಾರ್ಯ ನೆರವೇರಿಸುತ್ತಾರೆ. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಈ ಕಾರ್ಯದಲ್ಲಿ ಭಾಗಿಯಾಗುತ್ತಾರೆ.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…