ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ ಒಡೆಯ ಪಂಜದ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯುತ್ತದೆ. ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತವು ಪ್ರತೀ ವರ್ಷ ಈ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದೆ.
ಪಂಜ ಸೀಮೆಯ, ಇಡೀ ಸುಳ್ಯ ತಾಲೂಕು ಹಾಗೂ ಕಡಬ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ನಡೆಯುವ ಮುನ್ನ ಅಂದರೆ ಫೆ. 2 ರಂದು ಮೂಲ ನಾಗ ತೀರ್ಥದಲ್ಲಿ ಪೂಜೆ ನಡೆಯುತ್ತದೆ. ಬಂಟಮಲೆಯ ಕಾಡಿನ ತಪ್ಪಲು ಪ್ರದೇಶವಾದ ಈ ಜಾಗದಲ್ಲಿ ಅಂದರೆ ಗಧಾತೀರ್ಥ ಪ್ರದೇಶ ನೀರಿನ ಮೂಲಕ್ಕೆ ಪೂಜೆ ನಡೆಯುತ್ತದೆ. ಅದಾದ ಬಳಿಕ ತೀರ್ಥವನ್ನು ದೇವಸ್ಥಾನಕ್ಕೆ ತರಲಾಗುತ್ತದೆ. ಈ ಮೂಲಕ ಪ್ರಕೃತಿಯ ಆರಾಧನೆ ನಡೆಯುತ್ತದೆ. ದೇವಸ್ಥಾನದ ಅರ್ಚಕರು, ತಂತ್ರಿಗಳು ಪೂಜೆ ಕಾರ್ಯ ನೆರವೇರಿಸುತ್ತಾರೆ. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಈ ಕಾರ್ಯದಲ್ಲಿ ಭಾಗಿಯಾಗುತ್ತಾರೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…