ಪ್ರಕೃತಿ ಎಂದರೇ ದೇವರು. ಪ್ರಕೃತಿ ಮುನಿದರೆ ದೇವನು ಮುನಿದಂತೆಯೇ. ಹೀಗಾಗಿ ಪ್ರಕೃತಿ ಆರಾಧನೆಗೆ ಹಿಂದಿನಿಂದಲೂ ಮಹತ್ವ ಇದೆ. ಅಂತಹದ್ದೇ ಕಾರ್ಯವೊಂದು ಇತಿಹಾಸ ಪ್ರಸಿದ್ಧ , ಪಂಜ ಸೀಮೆಯ ಒಡೆಯ ಪಂಜದ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯುತ್ತದೆ. ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತವು ಪ್ರತೀ ವರ್ಷ ಈ ಸಂಪ್ರದಾಯವನ್ನು ನಡೆಸಿಕೊಂಡು ಬರುತ್ತಿದೆ.
ಪಂಜ ಸೀಮೆಯ, ಇಡೀ ಸುಳ್ಯ ತಾಲೂಕು ಹಾಗೂ ಕಡಬ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ನಡೆಯುವ ಮುನ್ನ ಅಂದರೆ ಫೆ. 2 ರಂದು ಮೂಲ ನಾಗ ತೀರ್ಥದಲ್ಲಿ ಪೂಜೆ ನಡೆಯುತ್ತದೆ. ಬಂಟಮಲೆಯ ಕಾಡಿನ ತಪ್ಪಲು ಪ್ರದೇಶವಾದ ಈ ಜಾಗದಲ್ಲಿ ಅಂದರೆ ಗಧಾತೀರ್ಥ ಪ್ರದೇಶ ನೀರಿನ ಮೂಲಕ್ಕೆ ಪೂಜೆ ನಡೆಯುತ್ತದೆ. ಅದಾದ ಬಳಿಕ ತೀರ್ಥವನ್ನು ದೇವಸ್ಥಾನಕ್ಕೆ ತರಲಾಗುತ್ತದೆ. ಈ ಮೂಲಕ ಪ್ರಕೃತಿಯ ಆರಾಧನೆ ನಡೆಯುತ್ತದೆ. ದೇವಸ್ಥಾನದ ಅರ್ಚಕರು, ತಂತ್ರಿಗಳು ಪೂಜೆ ಕಾರ್ಯ ನೆರವೇರಿಸುತ್ತಾರೆ. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಈ ಕಾರ್ಯದಲ್ಲಿ ಭಾಗಿಯಾಗುತ್ತಾರೆ.
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…
ಟ್ರಂಪ್ ಅವರ ಸುಂಕಗಳು ರಬ್ಬರ್ ಉದ್ಯಮದ ಮೇಲೆ ಪರಿಣಾಮ ಬೀರಬಹುದು ಎಂದು ಅಖಿಲ…