Advertisement
ಸುದ್ದಿಗಳು

ಪಂಜದ ಕುಡಿಯುವ ನೀರಿನ ಟ್ಯಾಂಕ್‌ ಸಮಸ್ಯೆ | ಜನರ ಹೋರಾಟಕ್ಕೆ ಸಿಕ್ಕಿದ ಮಾನ್ಯತೆ | ಪೈಪ್‌ ಲೈನ್‌ ಸರ್ವೆ ಕಾರ್ಯ ನಡೆಸಿದ ಇಲಾಖೆ | |

Share

ಸುಳ್ಯ ತಾಲೂಕಿನ ಪಂಜದ ಅಳ್ಪೆ ಚಿಂಗಾಣಿಗುಡ್ಡೆಯಲ್ಲಿ ಅನೇಕ ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣ ಮಾಡಲಾಗಿತ್ತು. ಆದರೆ ಟ್ಯಾಂಕ್‌ ಗೆ  ನೀರು ಸರಬರಾಜು ಆಗದೆ ಇಡೀ ಯೋಜನೆ ವಿಫಲವಾಗಿತ್ತು. ಹೀಗಾಗಿ ಚಿಂಗಾಣಿ ಗುಡ್ಡೆಯ ನಾಗರಿಕರು ಹಾಗೂ ಸಾಮಾಜಿಕ ಹೋರಾಟಗಾರ ಜಿನ್ನಪ್ಪ  ಅಳ್ಪೆ ಅವರು  ಈ ಬಗ್ಗೆ ಹೋರಾಟ ನಡೆಸಿದ್ದರು. ಇದೀಗ ಪೈಪ್‌ ಲೈನ್‌ ಸರ್ವೆ ಕಾರ್ಯ ಆರಂಭವಾಗಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಪಂಜದಲ್ಲಿ  ನೀರಿನ ಟ್ಯಾಂಕ್‌ ರಚನೆಯಾಗಿ ಅದಕ್ಕೆ ಪುಳಿಕುಕ್ಕು ಬಳಿಯಲ್ಲಿ ಹಾದುಹೋಗುವ ಕುಮಾರಧಾರೆಯಿಂದ ನೀರು ಹಾಯಿಸುವುದು  ಯೋಜನೆಯ ಉದ್ದೇಶವಾಗಿತ್ತು. ಆದರೆ ಕಾಮಗಾರಿಗೂ ಮುನ್ನ ಸರಿಯಾದ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ  ಇಡೀ ಯೋಜನೆ ವಿಫಲವಾಗಿತ್ತು, ನೀರಿನ ಟ್ಯಾಂಕ್‌ ಗೆ ಕುಮಾರಧಾರಾ ನದಿಯಿಂದ ನೀರು ಹಾಯಿಸಲು ಸಾಧ್ಯವಾಗಿರಲಿಲ್ಲ. ತಾಂತ್ರಿಕ ಕಾರಣವನ್ನು  ತಿಳಿಸಲಾಗಿತ್ತು. ಹೀಗಾಗಿ ಈ ಬಗ್ಗೆ ಹಲವು ವರ್ಷಗಳಿಂದ ಸ್ಥಳೀಯರು ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರು. ಹಾಗಿದ್ದರೂ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ  ಕಳೆದ ಬಾರಿಯ ಗ್ರಾ ಪಂ ಚುನಾವಣೆಯ ಸಂದರ್ಭದಲ್ಲೂ ವಿರೋಧ ಬಂದು ವಿವಿಧ ಬೇಡಿಕೆಗಳನ್ನಿಟ್ಟು ನಾಗರಿಕರು  ತಂಡ ಕಟ್ಟಿ ಗ್ರಾಮಸ್ವರಾಜ್ಯ ತಂಡ ಕಟ್ಟಿ ಸ್ಫರ್ಧೆ ಮಾಡಿದ್ದರು. ಯಾವುದೇ ಕಾರಣಕ್ಕೂ ಈ ನೀರಿನ ಯೋಜನೆ ವಿಫಲವಾಗಬಾರದು ಎಂದು  ಸತತ ಹೋರಾಟ ನಡೆಸುತ್ತಿದ್ದರು. ಇಲಾಖೆಗಳಿಗೆ ಮನವಿ ಮಾಡಿ ಹೋರಾಟ ನಡೆಸುವುದಾಗಿ ತಿಳಿಸಿದ್ದರು.

ಇದೀಗ 7  ವರ್ಷಗಳ ಹಿಂದೆ ರಚನೆಯಾದ ಈ ಯೋಜನೆಗೆ ನೀರು ಹಾಯಿಸುವ ಉದ್ದೇಶದಿಂದ ಪುಳಿಕುಕ್ಕಿನಿಂದ ಪೈಪ್‌ ಲೈನ್‌ ಅಳವಡಿಕೆಗೆ ಸರ್ವೆ ಕಾರ್ಯ ನಡೆದಿದೆ. ಈ ಬಾರಿ ಟ್ಯಾಂಕ್‌ ಗೆ ನೀರು ಹಾಯಿಸುವ ಕೆಲಸ ಮಾಡಲಾಗುತ್ತದೆ ಎಂದು ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಸುಂದರಯ್ಯ ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಯೊಂದು ಸಾರ್ವಜನಿಕರ ಹಾಗೂ ಸಾಮಾಜಿಕ ಕಾರ್ಯಕರ್ತರ ಹೋರಾಟದ ಫಲವಾಗಿ ಮತ್ತೆ ಯೋಜನೆ ಚಾಲೂ ಆಗುವ ಸ್ಥಿತಿಗೆ ಬಂದಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

8 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago