ಸುದ್ದಿಗಳು

ಪಂಜದ ಕುಡಿಯುವ ನೀರಿನ ಟ್ಯಾಂಕ್‌ ಸಮಸ್ಯೆ | ಜನರ ಹೋರಾಟಕ್ಕೆ ಸಿಕ್ಕಿದ ಮಾನ್ಯತೆ | ಪೈಪ್‌ ಲೈನ್‌ ಸರ್ವೆ ಕಾರ್ಯ ನಡೆಸಿದ ಇಲಾಖೆ | |

Share

ಸುಳ್ಯ ತಾಲೂಕಿನ ಪಂಜದ ಅಳ್ಪೆ ಚಿಂಗಾಣಿಗುಡ್ಡೆಯಲ್ಲಿ ಅನೇಕ ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣ ಮಾಡಲಾಗಿತ್ತು. ಆದರೆ ಟ್ಯಾಂಕ್‌ ಗೆ  ನೀರು ಸರಬರಾಜು ಆಗದೆ ಇಡೀ ಯೋಜನೆ ವಿಫಲವಾಗಿತ್ತು. ಹೀಗಾಗಿ ಚಿಂಗಾಣಿ ಗುಡ್ಡೆಯ ನಾಗರಿಕರು ಹಾಗೂ ಸಾಮಾಜಿಕ ಹೋರಾಟಗಾರ ಜಿನ್ನಪ್ಪ  ಅಳ್ಪೆ ಅವರು  ಈ ಬಗ್ಗೆ ಹೋರಾಟ ನಡೆಸಿದ್ದರು. ಇದೀಗ ಪೈಪ್‌ ಲೈನ್‌ ಸರ್ವೆ ಕಾರ್ಯ ಆರಂಭವಾಗಿದೆ.

Advertisement

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಪಂಜದಲ್ಲಿ  ನೀರಿನ ಟ್ಯಾಂಕ್‌ ರಚನೆಯಾಗಿ ಅದಕ್ಕೆ ಪುಳಿಕುಕ್ಕು ಬಳಿಯಲ್ಲಿ ಹಾದುಹೋಗುವ ಕುಮಾರಧಾರೆಯಿಂದ ನೀರು ಹಾಯಿಸುವುದು  ಯೋಜನೆಯ ಉದ್ದೇಶವಾಗಿತ್ತು. ಆದರೆ ಕಾಮಗಾರಿಗೂ ಮುನ್ನ ಸರಿಯಾದ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ  ಇಡೀ ಯೋಜನೆ ವಿಫಲವಾಗಿತ್ತು, ನೀರಿನ ಟ್ಯಾಂಕ್‌ ಗೆ ಕುಮಾರಧಾರಾ ನದಿಯಿಂದ ನೀರು ಹಾಯಿಸಲು ಸಾಧ್ಯವಾಗಿರಲಿಲ್ಲ. ತಾಂತ್ರಿಕ ಕಾರಣವನ್ನು  ತಿಳಿಸಲಾಗಿತ್ತು. ಹೀಗಾಗಿ ಈ ಬಗ್ಗೆ ಹಲವು ವರ್ಷಗಳಿಂದ ಸ್ಥಳೀಯರು ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರು. ಹಾಗಿದ್ದರೂ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ  ಕಳೆದ ಬಾರಿಯ ಗ್ರಾ ಪಂ ಚುನಾವಣೆಯ ಸಂದರ್ಭದಲ್ಲೂ ವಿರೋಧ ಬಂದು ವಿವಿಧ ಬೇಡಿಕೆಗಳನ್ನಿಟ್ಟು ನಾಗರಿಕರು  ತಂಡ ಕಟ್ಟಿ ಗ್ರಾಮಸ್ವರಾಜ್ಯ ತಂಡ ಕಟ್ಟಿ ಸ್ಫರ್ಧೆ ಮಾಡಿದ್ದರು. ಯಾವುದೇ ಕಾರಣಕ್ಕೂ ಈ ನೀರಿನ ಯೋಜನೆ ವಿಫಲವಾಗಬಾರದು ಎಂದು  ಸತತ ಹೋರಾಟ ನಡೆಸುತ್ತಿದ್ದರು. ಇಲಾಖೆಗಳಿಗೆ ಮನವಿ ಮಾಡಿ ಹೋರಾಟ ನಡೆಸುವುದಾಗಿ ತಿಳಿಸಿದ್ದರು.

ಇದೀಗ 7  ವರ್ಷಗಳ ಹಿಂದೆ ರಚನೆಯಾದ ಈ ಯೋಜನೆಗೆ ನೀರು ಹಾಯಿಸುವ ಉದ್ದೇಶದಿಂದ ಪುಳಿಕುಕ್ಕಿನಿಂದ ಪೈಪ್‌ ಲೈನ್‌ ಅಳವಡಿಕೆಗೆ ಸರ್ವೆ ಕಾರ್ಯ ನಡೆದಿದೆ. ಈ ಬಾರಿ ಟ್ಯಾಂಕ್‌ ಗೆ ನೀರು ಹಾಯಿಸುವ ಕೆಲಸ ಮಾಡಲಾಗುತ್ತದೆ ಎಂದು ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಸುಂದರಯ್ಯ ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಯೊಂದು ಸಾರ್ವಜನಿಕರ ಹಾಗೂ ಸಾಮಾಜಿಕ ಕಾರ್ಯಕರ್ತರ ಹೋರಾಟದ ಫಲವಾಗಿ ಮತ್ತೆ ಯೋಜನೆ ಚಾಲೂ ಆಗುವ ಸ್ಥಿತಿಗೆ ಬಂದಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…

9 hours ago

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

19 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

23 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

1 day ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

1 day ago