ಸುಳ್ಯ ತಾಲೂಕಿನ ಪಂಜದ ಅಳ್ಪೆ ಚಿಂಗಾಣಿಗುಡ್ಡೆಯಲ್ಲಿ ಅನೇಕ ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿತ್ತು. ಆದರೆ ಟ್ಯಾಂಕ್ ಗೆ ನೀರು ಸರಬರಾಜು ಆಗದೆ ಇಡೀ ಯೋಜನೆ ವಿಫಲವಾಗಿತ್ತು. ಹೀಗಾಗಿ ಚಿಂಗಾಣಿ ಗುಡ್ಡೆಯ ನಾಗರಿಕರು ಹಾಗೂ ಸಾಮಾಜಿಕ ಹೋರಾಟಗಾರ ಜಿನ್ನಪ್ಪ ಅಳ್ಪೆ ಅವರು ಈ ಬಗ್ಗೆ ಹೋರಾಟ ನಡೆಸಿದ್ದರು. ಇದೀಗ ಪೈಪ್ ಲೈನ್ ಸರ್ವೆ ಕಾರ್ಯ ಆರಂಭವಾಗಿದೆ.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಪಂಜದಲ್ಲಿ ನೀರಿನ ಟ್ಯಾಂಕ್ ರಚನೆಯಾಗಿ ಅದಕ್ಕೆ ಪುಳಿಕುಕ್ಕು ಬಳಿಯಲ್ಲಿ ಹಾದುಹೋಗುವ ಕುಮಾರಧಾರೆಯಿಂದ ನೀರು ಹಾಯಿಸುವುದು ಯೋಜನೆಯ ಉದ್ದೇಶವಾಗಿತ್ತು. ಆದರೆ ಕಾಮಗಾರಿಗೂ ಮುನ್ನ ಸರಿಯಾದ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಇಡೀ ಯೋಜನೆ ವಿಫಲವಾಗಿತ್ತು, ನೀರಿನ ಟ್ಯಾಂಕ್ ಗೆ ಕುಮಾರಧಾರಾ ನದಿಯಿಂದ ನೀರು ಹಾಯಿಸಲು ಸಾಧ್ಯವಾಗಿರಲಿಲ್ಲ. ತಾಂತ್ರಿಕ ಕಾರಣವನ್ನು ತಿಳಿಸಲಾಗಿತ್ತು. ಹೀಗಾಗಿ ಈ ಬಗ್ಗೆ ಹಲವು ವರ್ಷಗಳಿಂದ ಸ್ಥಳೀಯರು ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರು. ಹಾಗಿದ್ದರೂ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ ಕಳೆದ ಬಾರಿಯ ಗ್ರಾ ಪಂ ಚುನಾವಣೆಯ ಸಂದರ್ಭದಲ್ಲೂ ವಿರೋಧ ಬಂದು ವಿವಿಧ ಬೇಡಿಕೆಗಳನ್ನಿಟ್ಟು ನಾಗರಿಕರು ತಂಡ ಕಟ್ಟಿ ಗ್ರಾಮಸ್ವರಾಜ್ಯ ತಂಡ ಕಟ್ಟಿ ಸ್ಫರ್ಧೆ ಮಾಡಿದ್ದರು. ಯಾವುದೇ ಕಾರಣಕ್ಕೂ ಈ ನೀರಿನ ಯೋಜನೆ ವಿಫಲವಾಗಬಾರದು ಎಂದು ಸತತ ಹೋರಾಟ ನಡೆಸುತ್ತಿದ್ದರು. ಇಲಾಖೆಗಳಿಗೆ ಮನವಿ ಮಾಡಿ ಹೋರಾಟ ನಡೆಸುವುದಾಗಿ ತಿಳಿಸಿದ್ದರು.
ಇದೀಗ 7 ವರ್ಷಗಳ ಹಿಂದೆ ರಚನೆಯಾದ ಈ ಯೋಜನೆಗೆ ನೀರು ಹಾಯಿಸುವ ಉದ್ದೇಶದಿಂದ ಪುಳಿಕುಕ್ಕಿನಿಂದ ಪೈಪ್ ಲೈನ್ ಅಳವಡಿಕೆಗೆ ಸರ್ವೆ ಕಾರ್ಯ ನಡೆದಿದೆ. ಈ ಬಾರಿ ಟ್ಯಾಂಕ್ ಗೆ ನೀರು ಹಾಯಿಸುವ ಕೆಲಸ ಮಾಡಲಾಗುತ್ತದೆ ಎಂದು ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಸುಂದರಯ್ಯ ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಯೊಂದು ಸಾರ್ವಜನಿಕರ ಹಾಗೂ ಸಾಮಾಜಿಕ ಕಾರ್ಯಕರ್ತರ ಹೋರಾಟದ ಫಲವಾಗಿ ಮತ್ತೆ ಯೋಜನೆ ಚಾಲೂ ಆಗುವ ಸ್ಥಿತಿಗೆ ಬಂದಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…