Advertisement
ಸುದ್ದಿಗಳು

ಪಂಜದ ಕುಡಿಯುವ ನೀರಿನ ಟ್ಯಾಂಕ್‌ ಸಮಸ್ಯೆ | ಜನರ ಹೋರಾಟಕ್ಕೆ ಸಿಕ್ಕಿದ ಮಾನ್ಯತೆ | ಪೈಪ್‌ ಲೈನ್‌ ಸರ್ವೆ ಕಾರ್ಯ ನಡೆಸಿದ ಇಲಾಖೆ | |

Share

ಸುಳ್ಯ ತಾಲೂಕಿನ ಪಂಜದ ಅಳ್ಪೆ ಚಿಂಗಾಣಿಗುಡ್ಡೆಯಲ್ಲಿ ಅನೇಕ ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣ ಮಾಡಲಾಗಿತ್ತು. ಆದರೆ ಟ್ಯಾಂಕ್‌ ಗೆ  ನೀರು ಸರಬರಾಜು ಆಗದೆ ಇಡೀ ಯೋಜನೆ ವಿಫಲವಾಗಿತ್ತು. ಹೀಗಾಗಿ ಚಿಂಗಾಣಿ ಗುಡ್ಡೆಯ ನಾಗರಿಕರು ಹಾಗೂ ಸಾಮಾಜಿಕ ಹೋರಾಟಗಾರ ಜಿನ್ನಪ್ಪ  ಅಳ್ಪೆ ಅವರು  ಈ ಬಗ್ಗೆ ಹೋರಾಟ ನಡೆಸಿದ್ದರು. ಇದೀಗ ಪೈಪ್‌ ಲೈನ್‌ ಸರ್ವೆ ಕಾರ್ಯ ಆರಂಭವಾಗಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಪಂಜದಲ್ಲಿ  ನೀರಿನ ಟ್ಯಾಂಕ್‌ ರಚನೆಯಾಗಿ ಅದಕ್ಕೆ ಪುಳಿಕುಕ್ಕು ಬಳಿಯಲ್ಲಿ ಹಾದುಹೋಗುವ ಕುಮಾರಧಾರೆಯಿಂದ ನೀರು ಹಾಯಿಸುವುದು  ಯೋಜನೆಯ ಉದ್ದೇಶವಾಗಿತ್ತು. ಆದರೆ ಕಾಮಗಾರಿಗೂ ಮುನ್ನ ಸರಿಯಾದ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ  ಇಡೀ ಯೋಜನೆ ವಿಫಲವಾಗಿತ್ತು, ನೀರಿನ ಟ್ಯಾಂಕ್‌ ಗೆ ಕುಮಾರಧಾರಾ ನದಿಯಿಂದ ನೀರು ಹಾಯಿಸಲು ಸಾಧ್ಯವಾಗಿರಲಿಲ್ಲ. ತಾಂತ್ರಿಕ ಕಾರಣವನ್ನು  ತಿಳಿಸಲಾಗಿತ್ತು. ಹೀಗಾಗಿ ಈ ಬಗ್ಗೆ ಹಲವು ವರ್ಷಗಳಿಂದ ಸ್ಥಳೀಯರು ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರು. ಹಾಗಿದ್ದರೂ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ  ಕಳೆದ ಬಾರಿಯ ಗ್ರಾ ಪಂ ಚುನಾವಣೆಯ ಸಂದರ್ಭದಲ್ಲೂ ವಿರೋಧ ಬಂದು ವಿವಿಧ ಬೇಡಿಕೆಗಳನ್ನಿಟ್ಟು ನಾಗರಿಕರು  ತಂಡ ಕಟ್ಟಿ ಗ್ರಾಮಸ್ವರಾಜ್ಯ ತಂಡ ಕಟ್ಟಿ ಸ್ಫರ್ಧೆ ಮಾಡಿದ್ದರು. ಯಾವುದೇ ಕಾರಣಕ್ಕೂ ಈ ನೀರಿನ ಯೋಜನೆ ವಿಫಲವಾಗಬಾರದು ಎಂದು  ಸತತ ಹೋರಾಟ ನಡೆಸುತ್ತಿದ್ದರು. ಇಲಾಖೆಗಳಿಗೆ ಮನವಿ ಮಾಡಿ ಹೋರಾಟ ನಡೆಸುವುದಾಗಿ ತಿಳಿಸಿದ್ದರು.

ಇದೀಗ 7  ವರ್ಷಗಳ ಹಿಂದೆ ರಚನೆಯಾದ ಈ ಯೋಜನೆಗೆ ನೀರು ಹಾಯಿಸುವ ಉದ್ದೇಶದಿಂದ ಪುಳಿಕುಕ್ಕಿನಿಂದ ಪೈಪ್‌ ಲೈನ್‌ ಅಳವಡಿಕೆಗೆ ಸರ್ವೆ ಕಾರ್ಯ ನಡೆದಿದೆ. ಈ ಬಾರಿ ಟ್ಯಾಂಕ್‌ ಗೆ ನೀರು ಹಾಯಿಸುವ ಕೆಲಸ ಮಾಡಲಾಗುತ್ತದೆ ಎಂದು ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಸುಂದರಯ್ಯ ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಯೊಂದು ಸಾರ್ವಜನಿಕರ ಹಾಗೂ ಸಾಮಾಜಿಕ ಕಾರ್ಯಕರ್ತರ ಹೋರಾಟದ ಫಲವಾಗಿ ಮತ್ತೆ ಯೋಜನೆ ಚಾಲೂ ಆಗುವ ಸ್ಥಿತಿಗೆ ಬಂದಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

6 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

6 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

7 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

9 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

21 hours ago