ಸುಳ್ಯ ತಾಲೂಕಿನ ಪಂಜದ ಅಳ್ಪೆ ಚಿಂಗಾಣಿಗುಡ್ಡೆಯಲ್ಲಿ ಅನೇಕ ವರ್ಷಗಳ ಹಿಂದೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿತ್ತು. ಆದರೆ ಟ್ಯಾಂಕ್ ಗೆ ನೀರು ಸರಬರಾಜು ಆಗದೆ ಇಡೀ ಯೋಜನೆ ವಿಫಲವಾಗಿತ್ತು. ಹೀಗಾಗಿ ಚಿಂಗಾಣಿ ಗುಡ್ಡೆಯ ನಾಗರಿಕರು ಹಾಗೂ ಸಾಮಾಜಿಕ ಹೋರಾಟಗಾರ ಜಿನ್ನಪ್ಪ ಅಳ್ಪೆ ಅವರು ಈ ಬಗ್ಗೆ ಹೋರಾಟ ನಡೆಸಿದ್ದರು. ಇದೀಗ ಪೈಪ್ ಲೈನ್ ಸರ್ವೆ ಕಾರ್ಯ ಆರಂಭವಾಗಿದೆ.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಪಂಜದಲ್ಲಿ ನೀರಿನ ಟ್ಯಾಂಕ್ ರಚನೆಯಾಗಿ ಅದಕ್ಕೆ ಪುಳಿಕುಕ್ಕು ಬಳಿಯಲ್ಲಿ ಹಾದುಹೋಗುವ ಕುಮಾರಧಾರೆಯಿಂದ ನೀರು ಹಾಯಿಸುವುದು ಯೋಜನೆಯ ಉದ್ದೇಶವಾಗಿತ್ತು. ಆದರೆ ಕಾಮಗಾರಿಗೂ ಮುನ್ನ ಸರಿಯಾದ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಇಡೀ ಯೋಜನೆ ವಿಫಲವಾಗಿತ್ತು, ನೀರಿನ ಟ್ಯಾಂಕ್ ಗೆ ಕುಮಾರಧಾರಾ ನದಿಯಿಂದ ನೀರು ಹಾಯಿಸಲು ಸಾಧ್ಯವಾಗಿರಲಿಲ್ಲ. ತಾಂತ್ರಿಕ ಕಾರಣವನ್ನು ತಿಳಿಸಲಾಗಿತ್ತು. ಹೀಗಾಗಿ ಈ ಬಗ್ಗೆ ಹಲವು ವರ್ಷಗಳಿಂದ ಸ್ಥಳೀಯರು ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರು. ಹಾಗಿದ್ದರೂ ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ ಕಳೆದ ಬಾರಿಯ ಗ್ರಾ ಪಂ ಚುನಾವಣೆಯ ಸಂದರ್ಭದಲ್ಲೂ ವಿರೋಧ ಬಂದು ವಿವಿಧ ಬೇಡಿಕೆಗಳನ್ನಿಟ್ಟು ನಾಗರಿಕರು ತಂಡ ಕಟ್ಟಿ ಗ್ರಾಮಸ್ವರಾಜ್ಯ ತಂಡ ಕಟ್ಟಿ ಸ್ಫರ್ಧೆ ಮಾಡಿದ್ದರು. ಯಾವುದೇ ಕಾರಣಕ್ಕೂ ಈ ನೀರಿನ ಯೋಜನೆ ವಿಫಲವಾಗಬಾರದು ಎಂದು ಸತತ ಹೋರಾಟ ನಡೆಸುತ್ತಿದ್ದರು. ಇಲಾಖೆಗಳಿಗೆ ಮನವಿ ಮಾಡಿ ಹೋರಾಟ ನಡೆಸುವುದಾಗಿ ತಿಳಿಸಿದ್ದರು.
ಇದೀಗ 7 ವರ್ಷಗಳ ಹಿಂದೆ ರಚನೆಯಾದ ಈ ಯೋಜನೆಗೆ ನೀರು ಹಾಯಿಸುವ ಉದ್ದೇಶದಿಂದ ಪುಳಿಕುಕ್ಕಿನಿಂದ ಪೈಪ್ ಲೈನ್ ಅಳವಡಿಕೆಗೆ ಸರ್ವೆ ಕಾರ್ಯ ನಡೆದಿದೆ. ಈ ಬಾರಿ ಟ್ಯಾಂಕ್ ಗೆ ನೀರು ಹಾಯಿಸುವ ಕೆಲಸ ಮಾಡಲಾಗುತ್ತದೆ ಎಂದು ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಸುಂದರಯ್ಯ ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಯೊಂದು ಸಾರ್ವಜನಿಕರ ಹಾಗೂ ಸಾಮಾಜಿಕ ಕಾರ್ಯಕರ್ತರ ಹೋರಾಟದ ಫಲವಾಗಿ ಮತ್ತೆ ಯೋಜನೆ ಚಾಲೂ ಆಗುವ ಸ್ಥಿತಿಗೆ ಬಂದಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…