ಶಿರಾಡಿ ಘಾಟ್‌ | ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಭಾರಿ ವಾಹನ ಸಂಚಾರಕ್ಕೆ ನಡೆಯುತ್ತಿದೆ ಪರ್ಯಾಯ ರಸ್ತೆಗೆ ಸತತ ಪ್ರಯತ್ನ |

July 21, 2022
11:12 PM

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಸದ್ಯ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ಒಂದು ವಾರದೊಳಗಾಗಿ ಘನ ವಾಹನ ಸಂಚಾರಕ್ಕೂ ಅವಕಾಶ ನೀಡುವ ಪ್ರಯತ್ನ ಮುಂದುರಿದಿದೆ.

ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ಇದೀಗ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್‌, ಸಾರಿಗೆ ಸಂಸ್ಥೆಯ ಬಸ್‌, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಅಂಬುಲೆನ್ಸ್‌, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.

ಬುಲೆಟ್‌ ಟ್ಯಾಂಕರ್‌ಗಳು, ಕಾರ್ಗೋ ಕಂಟೈನರ್‌ಗಳು, ಉದ್ದ ಚಾಸಿ ಹೊಂದಿ ವಾಹನಗಳು, ಮಲ್ಟಿ ಎಕ್ಸೆಲ್‌ ಟ್ರಕ್‌ ಟ್ರೈಲರ್‌ಗಳು ಹಾಗೂ 20 ಟನ್‌ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ಸದ್ಯ ನಿರ್ಬಂಧಿಸಲಾಗಿದೆ. ಜುಲೈ 15 ರಿಂದ  ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸದ್ಯದಲ್ಲೇ ಬದಲಿ ಮಾರ್ಗದ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು . ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2 ಕಿಲೋಮೀಟರ್ ಹೊಸ ರಸ್ತೆ ಮಾಡಲು 4.3 ಕೋಟಿ ಹಣವನ್ನು ಮಂಜೂರು ಮಾಡಲಾಗಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror