MIRROR FOCUS

ಶಿರಾಡಿ ಘಾಟ್‌ | ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಭಾರಿ ವಾಹನ ಸಂಚಾರಕ್ಕೆ ನಡೆಯುತ್ತಿದೆ ಪರ್ಯಾಯ ರಸ್ತೆಗೆ ಸತತ ಪ್ರಯತ್ನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಸದ್ಯ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ಒಂದು ವಾರದೊಳಗಾಗಿ ಘನ ವಾಹನ ಸಂಚಾರಕ್ಕೂ ಅವಕಾಶ ನೀಡುವ ಪ್ರಯತ್ನ ಮುಂದುರಿದಿದೆ.

Advertisement

ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ಇದೀಗ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್‌, ಸಾರಿಗೆ ಸಂಸ್ಥೆಯ ಬಸ್‌, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಅಂಬುಲೆನ್ಸ್‌, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.

ಬುಲೆಟ್‌ ಟ್ಯಾಂಕರ್‌ಗಳು, ಕಾರ್ಗೋ ಕಂಟೈನರ್‌ಗಳು, ಉದ್ದ ಚಾಸಿ ಹೊಂದಿ ವಾಹನಗಳು, ಮಲ್ಟಿ ಎಕ್ಸೆಲ್‌ ಟ್ರಕ್‌ ಟ್ರೈಲರ್‌ಗಳು ಹಾಗೂ 20 ಟನ್‌ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ಸದ್ಯ ನಿರ್ಬಂಧಿಸಲಾಗಿದೆ. ಜುಲೈ 15 ರಿಂದ  ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸದ್ಯದಲ್ಲೇ ಬದಲಿ ಮಾರ್ಗದ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು . ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2 ಕಿಲೋಮೀಟರ್ ಹೊಸ ರಸ್ತೆ ಮಾಡಲು 4.3 ಕೋಟಿ ಹಣವನ್ನು ಮಂಜೂರು ಮಾಡಲಾಗಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

9 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

10 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

10 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

10 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

10 hours ago